ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಗೆ ಸಮಯ ಫಿಕ್ಸ್!

ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಗೆ ಸಮಯ ಫಿಕ್ಸ್!

ಕೋಟ್ಯಂತರ ಹಿಂದೂಗಳ ಕನಸು ನನಸಾಗುವ ಕಾಲ ಹತ್ತಿರವಾಗುತ್ತಿದೆ. ಅಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಕೊನೆಯ ಹಂತಕ್ಕೆ ತಲುಪಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಭವ್ಯ ದೇಗುಲ ಜನವರಿ 22ರಂದು ಲೋಕಾರ್ಪಣೆಯಾಗಲಿದ್ದು, ಅಂದೇ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಇದೀಗ ರಾಮಲಲ್ಲಾ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ರೂಪ ನೀಡಲು ತಯಾರಿ ನಡದಿದೆ.

ಅಯೋಧ್ಯೆ ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಭಿಜಿತ್ ಮುಹೂರ್ತ ಮೃಗಶಿರಾ ನಕ್ಷತ್ರದಲ್ಲಿ ಮಧ್ಯಾಹ್ನ 12:20 ಕ್ಕೆ ರಾಮಲಲ್ಲಾ ಮಹಾಮಸ್ತಕಾಭಿಷೇಕವನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ಕೆ ಅಂತಾರಾಷ್ಟ್ರೀಯ ರೂಪ ನೀಡಲು ತಯಾರಿ ನಡದಿದೆ. ಸಮಾರಂಭವನ್ನು ನಾಲ್ಕು ಹಂತಗಳಾಗಿ ವಿಂಗಡಿಸಿ ಸಿದ್ಧತೆಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಶ್ರೀಲಂಕಾದ ಅಶೋಕ ವನದಲ್ಲಿ ಸೀತಾ ಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಯ ರಾಮ ಮಂದಿರಕ್ಕೆ ಆಮದು!

ಮೊದಲ ಹಂತವು ರಾಮಲಲ್ಲಾ ಪ್ರತಿಷ್ಠಾಪನೆ ತಯಾರಿ ಬಗ್ಗೆ ಡಿಸೆಂಬರ್ 20ರಂದು ಸಭೆ ನಡೆಲಾಗಿದೆ. ಇದರಲ್ಲಿ ಕಾರ್ಯ ಕ್ರಮದ ರೂಪುರೇಷೆ ಸಿದ್ಧಪಡಿಸಲಾಗುತ್ತದೆ. ಇದಕ್ಕಾಗಿ ಚಾಲನಾ ಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿ ತಲಾ 10 ಜನರ ಗುಂಪು ರಚಿಸಲು ಒಪ್ಪಿಗೆ ನೀಡಲಾಗಿದೆ. ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಸಮಿತಿಗಳಲ್ಲಿ ಮಂದಿರ ಹೋರಾಟದಲ್ಲಿ ಭಾಗಿಯಾದ ಕರಸೇವಕರನ್ನು ಸೇರಿಸಿಕೊಳ್ಳಲು ನಿರ್ಧರಿಸಲಾಗದೆ. ಗುಂಪುಗಳು 250 ಸ್ಥಳಗಳಲ್ಲಿ ಸಭೆಗಳನ್ನು ನಡೆಸು ಕಾರ್ಯಯೋಜನೆ ರೂಪಿಸಲಾಗಿದೆ. ಕಾರ್ಯದಲ್ಲಿ ಹೆಚ್ಚು ಹೆಚ್ಚು ಜನರನ್ನು ತೊಡಗಿಸಿಕೊಳ್ಳಲು ಮನವಿ ಸಮಿತಿಗಳು ಮನವಿ ಮಾಡಲಿವೆ. ಎರಡನೇ ಹಂತ ಜನವರಿ 1ರಿಂದ ಆರಂಭವಾಗಲಿದೆ.

ಇದರಲ್ಲಿ ಮನೆ,ಮನೆಗೆ ಸಂಪರ್ಕ ಯೋಜನೆಯಡಿ 10 ಕೋಟಿ ಕುಟುಂಬಗಳಲ್ಲಿ ತಲುಪವ ಗುರಿ ಹೊಂದಲಾಗಿದೆ. ಅಕ್ಷತೆ, ರಾಮಲಲ್ಲ ಮೂರ್ತಿ ಚಿತ್ರ ಹಾಗೂ ಕರಪತ್ರವನ್ನು 10 ಕೋಟಿ ಕುಟುಂಬಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಉದ್ಘಾಟನೆ ದಿನದಂದು ಮನೆಗಳಲ್ಲಿ ದೀಪೋತ್ಸವ ಆಚರಣೆಗೆ ಮನವಿ ಮಾಡಲಿದ್ದಾರೆ.

ಜನವರಿ 22ರಂದು ಅಂದರೆ ರಾಮಲಲ್ಲಾ ಪ್ರತಿಷ್ಠಾಪನಾ ದಿನ ಮೂರನೇ ಹಂತವಾಗಿದೆ. ಅಂದು ಇಡೀ ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡುವುದಾಗಿದೆ. ಮನೆಮನೆಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯುವಂತಹ ವಾತಾವರಣ ನಿರ್ಮಾಣವಾಗಲಿದೆ. ನಾಲ್ಕನೇ ಹಂತದಲ್ಲಿ ದೇಶಾದ್ಯಂತ ಅಯೋಧ್ಯೆಗೆ ಬರುವ ಭಕ್ತಾದಿಗಳಿಗೆ ರಾಮಲಲ್ಲಾ ದರ್ಶನ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಹಂತವು ಗಣರಾಜ್ಯೋತ್ಸವ ದಿನ ಜನವರಿ 26ಕ್ಕೆ ಪ್ರಾರಂಭವಾಗುತ್ತದೆ. ಸುಮಾರು ಒಂದು ತಿಂಗಳ ಕಾಲ ಅಂದರೆ ಫೆಬ್ರವರಿ 22 ರವರೆಗೆ ಮುಂದುವರಿಯುತ್ತದೆ. ರಾಮಲಲ್ಲಾ ದರ್ಶನ ಯೋಜನೆ ಅಭಿಯಾನವನ್ನು ಪ್ರಾಂತ್ಯವಾರು ನಡೆಸಲು ಚಿಂತಿಸಲಾಗಿದೆ. ಜನವರಿ 31 ಮತ್ತು ಫೆಬ್ರವರಿ 01 ರಂದು ಅವಧ್ ಪ್ರಾಂತ್ಯದ ಭಕ್ತರಿಗೆ ದರ್ಶನ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ.

Shwetha M