ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ – ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದ ಜಾಹೀರಾತಿನಲ್ಲಿ ಎಸ್.ಟಿ.ಸೋಮಶೇಖರ್ ಫೋಟೋ!

ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ – ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದ ಜಾಹೀರಾತಿನಲ್ಲಿ ಎಸ್.ಟಿ.ಸೋಮಶೇಖರ್ ಫೋಟೋ!

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಇದರ ಮಧ್ಯೆಯೇ ಪಕ್ಷಾಂತರ ಪರ್ವ ಸಹ ಶುರುವಾಗಿದೆ. ಕೆಲ ಬಿಜೆಪಿ ನಾಯಕರು ಕಾಂಗ್ರೆಸ್‌ ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದ ಜಾಹೀರಾತಿನಲ್ಲಿ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಭಾವಚಿತ್ರ ಇರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ 2ನೇ ಅತಿದೊಡ್ಡ ವಾಯುನೆಲೆ ಮೇಲೆ ದಾಳಿ – 12 ಕ್ಕೂ ಅಧಿಕ ಮಂದಿ ಸಾವು

ಚುನಾವಣೆ ಹೊತ್ತಲ್ಲಿ ಕೆಲ ನಾಯಕರು ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. ಬಿಜೆಪಿ ನಾಯಕರಾಗಿದ್ದ ಹೆಚ್‌.ವಿ.ರಾಜೀವ್‌ ಬುಧವಾರ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ. ಈ ಜಾಹೀರಾತಿನಲ್ಲಿ ಎಸ್‌.ಟಿ.ಸೋಮಶೇಖರ್‌ ಅವರ ಭಾವಚಿತ್ರವೂ ಇದೆ. ಸದ್ಯ ಇದರ ಫೋಟೋ ಭಾರಿ ವೈರಲ್‌ ಆಗುತ್ತಿದೆ.

ಈಗಾಗಲೇ ಕಾಂಗ್ರೆಸ್‌ ನಾಯಕರ ಜೊತೆ ಎಸ್‌.ಟಿ.ಸೋಮಶೇಖರ್‌ ಕಾಣಿಸಿಕೊಳ್ಳುತ್ತಿದ್ದಾರೆ. ರಾಜ್ಯಸಭಾ ಚುನಾವಣಾ ಸಂದರ್ಭದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದ್ದರು. ಇದೀಗ ಎಸ್ ಟಿ ಸೋಮಶೇಖರ್‌ ಫೋಟೋ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಎಸ್‌ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಾರಾ ಅಂತಾ ಕಾದು ನೋಡಬೇಕಿದೆ.

Shwetha M