ಸುಮಲತಾ ಬೆಂಬಲ ಹೆಚ್‌ಡಿಕೆಗೋ? ಸ್ಟಾರ್‌ ಚಂದ್ರುಗೋ? – ಚರ್ಚೆಗೆ ಗ್ರಾಸವಾಯ್ತು ರೆಬಲ್‌ ನಾಯಕಿ ಪೋಸ್ಟ್‌!

ಸುಮಲತಾ ಬೆಂಬಲ ಹೆಚ್‌ಡಿಕೆಗೋ? ಸ್ಟಾರ್‌ ಚಂದ್ರುಗೋ? – ಚರ್ಚೆಗೆ ಗ್ರಾಸವಾಯ್ತು ರೆಬಲ್‌ ನಾಯಕಿ ಪೋಸ್ಟ್‌!

ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ 14 ಲೋಕಸಭಾ ಕ್ಷೇತ್ರದಲ್ಲಿ ನಡೆಯಲಿದೆ. ಈ ಬಾರಿ ಮಂಡ್ಯ ಹೈವೋಲ್ಟೇಜ್‌ ಕ್ಷೇತ್ರವಾಗಿದೆ. ಕಾಂಗ್ರೆಸ್‌ನಿಂದ ಸ್ಟಾರ್‌ ಚಂದ್ರು ಕಣಕ್ಕಿಳಿದಿದ್ದರೆ, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸಿದ್ದಾರೆ. ಸುಮಲತಾ ಅಂಬರೀಶ್‌ ಚುನಾವಣೆಯಲ್ಲಿ ಸ್ಪರ್ಧಿಸದೇ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ:  ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

ಸುಮಲತಾ ಅಂಬರೀಶ್‌ ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮೈಸೂರು ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ರು. ಆದ್ರೆ ಮಂಡ್ಯ ಅಭ್ಯರ್ಥಿ ಹೆಚ್‌. ಡಿ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗಿಲ್ಲ. ಇದು ಜೆಡಿಎಸ್‌ ಪಾಳಯದಲ್ಲಿ ಅಸಮಧಾನಕ್ಕೆ ಕಾರಣವಾಗಿತ್ತು. ಮಂಡ್ಯ ಚುನಾವಣೆಯಲ್ಲಿ ಸುಮಲತಾ ಅವರ ನಡೆ ಇನ್ನೂ ನಿಗೂಢವಾಗಿಯೇ ಇದೆ. ಈ ಹೊತ್ತಲ್ಲೇ ಸುಮಲತಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ವೊಂದನ್ನು ಹಾಕಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸೋಷಿಯಲ್ ಮೀಡಿಯಾ Xನಲ್ಲಿ ಟ್ವೀಟ್ ಮಾಡಿರುವ ಸುಮಲತಾ ಅಂಬರೀಶ್, ಏನು ಹೇಳಬೇಕೆನ್ನುವುದು ಜ್ಞಾನ. ಹೇಗೆ ಹೇಳಬೇಕೆನ್ನುವುದು ವ್ಯಕ್ತಿತ್ವ. ಎಷ್ಟು ಹೇಳಬೇಕೆನ್ನುವುದು ಕೌಶಲ್ಯ. ಹೇಳಬೇಕೋ ಬೇಡವೋ ಎನ್ನುವುದು ವಿವೇಕ ಎಂದು ವಿಶೇಷ ಅರ್ಥ ಕೊಡುವ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನೋಡಿದ ಅಭಿಮಾನಿಗಳು ನಿಮ್ಮ ಬೆಂಬಲ ಕುಮಾರಸ್ವಾಮಿಗೋ? ಸ್ಟಾರ್ ಚಂದ್ರುಗೋ ಎಂದು ಪ್ರಶ್ನಿಸುತ್ತಿದ್ದಾರೆ.

Shwetha M

Leave a Reply

Your email address will not be published. Required fields are marked *