ಎಲ್ಲವೂ ಕೇಂದ್ರದ ಆಜ್ಞೆಯಂತೆ ನಡೀಬೇಕಂದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಏಕೆ ಬೇಕು ? –ಸುಪ್ರೀಂಕೋರ್ಟ್

ಎಲ್ಲವೂ ಕೇಂದ್ರದ ಆಜ್ಞೆಯಂತೆ ನಡೀಬೇಕಂದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಏಕೆ ಬೇಕು ? –ಸುಪ್ರೀಂಕೋರ್ಟ್

ಎಲ್ಲವೂ ಕೇಂದ್ರದ ಆಜ್ಞೆಯಂತೆಯೇ ನಡೆಯಬೇಕು ಎಂದಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಏಕೆ ಬೇಕು ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮತ್ತು ಕೇಂದ್ರದ ನಡುವಿನ ವಿವಾದದ ವಿಚಾರಣೆ ನಡೆಸುತ್ತಿರುವ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಈ ಕುರಿತು ಕೇಳಿದರು. ಹಾಗಾದರೆ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶವೇನು? ಕೇಂದ್ರ ಸರ್ಕಾರದ ಅಣತಿಯಂತೆ ಮಾತ್ರ ಆಡಳಿತ ನಡೆಸಬೇಕಾದರೆ ದೆಹಲಿ ಸರ್ಕಾರ ಇದ್ದೂ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:  ಜಗತ್ತಿನ ಅತಿ ಉದ್ದ ಹಡಗು ‘ಗಂಗಾ ವಿಲಾಸ್’ ಲೋಕಾರ್ಪಣೆ – 27 ನದಿಗಳಲ್ಲಿ ಪ್ರವಾಸಿಗರ ನೌಕಾ ಯಾನ

ಪೌರಕಾರ್ಮಿಕರ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮತ್ತು ಕೇಂದ್ರದ ನಡುವಿನ ವಿಷಯವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ, ಪರಿಸರ ಇತ್ಯಾದಿ ಇಲಾಖೆಗಳಿಗೆ ಸಂಬಂಧಿಸಿದ ಹುದ್ದೆಗಳಿಗೆ ನೇಮಕಾತಿ ಮಾಡಲು ದೆಹಲಿ ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ. ಇದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಕಾರ್ಯಾಂಗದ ನಿಯಂತ್ರಣ ಕೇಂದ್ರದ ಬಳಿ ಇದ್ದರೆ, ದೆಹಲಿ ಸರ್ಕಾರ ಶಾಸಕಾಂಗ ಅಧಿಕಾರವನ್ನು ಹೊಂದಿರುವುದರ ಅರ್ಥವೇನು ಎಂದು ಕೇಳಿದೆ. ಆದರೆ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ದೆಹಲಿಯು ಸಂವಿಧಾನದ 308ನೇ ವಿಧಿಯ ಪ್ರಕಾರ ತನ್ನದೇ ಆದ ಅಧಿಕಾರಿಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದಾರೆ.

suddiyaana