ಜಾಮೀನು ಅವಧಿ ವಿಸ್ತರಣೆಗೆ ಕೋರಿದ್ದ ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ –   ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ಜಾಮೀನು ಅವಧಿ ವಿಸ್ತರಣೆಗೆ ಕೋರಿದ್ದ ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ –   ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರೀವಾಲ್‌ಗೆ ಹಿನ್ನಡೆಯಾಗಿದೆ. ದೆಹಲಿ ಸಿಎಂ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರು ಬದಲಾಗಲಿದ್ದಾರೆಯೇ? – ಕಾಂಗ್ರೆಸ್‌ ನಾಯಕರು ಹೇಳಿದ್ದೇನು?

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಇದೀಗ ಮದ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಅರವಿಂದ್ ಕೇಜ್ರಿವಾಲ್, ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್​ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದರು. ಆದರೆ ಇದೀಗ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೀಗಾಗಿ ಅರವಿಂದ್‌ ಕೇಜ್ರೀವಾಲ್‌ ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.

ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ ಕೊನೆಯ ಹಂತದ ಮತದಾನದ ಒಂದು ದಿನದ ನಂತರ ಜೂನ್ 2 ರಂದು ದೆಹಲಿ ಸಿಎಂ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಗುತ್ತದೆ. ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್​, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ನಿರ್ಧಾರ ಸೂಕ್ತ, ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ.

ಅವರು ಸಮಾಜಕ್ಕೆ ಬೆದರಿಕೆಯಲ್ಲ, ಅವರ ವಿರುದ್ಧ ಗಂಭೀರ ಆರೋಪಗಳಿವೆ ಆದರೆ ಅದ್ಯಾವುದರಲ್ಲೂ ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಹೇಳಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾಕ್ಷಿ ಜತೆ ಮಾತನಾಡದಂತೆ ಸೂಚಿಸಿತ್ತು.

ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪ್ರಾರಂಭವಾದ ತಕ್ಷಣ, ಅಭಿಷೇಕ್ ಮನು ಸಿಂಘ್ವಿ ನಮಗೆ ಇನ್ನೂ ಏಳು ದಿನಗಳ ಮಧ್ಯಂತರ ಜಾಮೀನು ವಿಸ್ತರಿಸಬೇಕೆಂದು ಹೇಳಿದರು. ವೈದ್ಯಕೀಯ ಪರೀಕ್ಷೆಗಳನ್ನು ಮಾಡಬೇಕಾಗಿದೆ. ಇದು ನ್ಯಾಯಾಲಯ ನೀಡಿರುವ ಸ್ವಾತಂತ್ರ್ಯದ ದುರ್ಬಳಕೆಯಲ್ಲ ಎಂದರು.

Shwetha M