‘ಸಿದ್ಧಗಂಗಾ ಮಠದ ₹10 ಕೋಟಿ ಅನುದಾನ ತಡೆ ಹಿಡಿಯಲಾಗಿದೆ’ – ಕಾಂಗ್ರೆಸ್ ವಿರುದ್ಧ ಸುರೇಶ್ ಗೌಡ ಗುಡುಗು!

‘ಸಿದ್ಧಗಂಗಾ ಮಠದ ₹10 ಕೋಟಿ ಅನುದಾನ ತಡೆ ಹಿಡಿಯಲಾಗಿದೆ’ – ಕಾಂಗ್ರೆಸ್ ವಿರುದ್ಧ ಸುರೇಶ್ ಗೌಡ ಗುಡುಗು!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಸಿದ್ಧಗಂಗಾ ಮಠದ 10 ಕೋಟಿ ರೂಪಾಯಿ ಅನುದಾನ ತಡೆ ಹಿಡಿದಿದ್ದಾರೆ. ನನ್ನ ಕ್ಷೇತ್ರದ 20 ಕೋಟಿ ರೂಪಾಯಿ ಅನುದಾನ ತಡೆಹಿಡಿಯಲಾಗಿದೆ. ಅದರಲ್ಲಿ ಸಿದ್ಧಗಂಗಾ ಮಠದ 10 ಕೋಟಿ ರೂಪಾಯಿ ಸಹ ಸೇರಿದೆ. ಸಿದ್ದಗಂಗಾ ಮಠದ ಅನುದಾನವನ್ನು ಶಾಶ್ವತವಾಗಿ ತಡೆ ಹಿಡಿಯುವ ಧಮ್ಮು ಸರ್ಕಾರಕ್ಕೆ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಹೀನಾಯ ಸೋಲಿಗೆ ಕಾರಣ ಕೇಳಿದ ಪ್ರಧಾನಿ – ಹಿರಿಯ ನಾಯಕರು ನೀಡಿದ ಮಾಹಿತಿಗಳೇನು?

ನನ್ನ ಕ್ಷೇತ್ರದ ಒಟ್ಟು 20 ಸಾವಿರ ಕೋಟಿ ರೂಪಾಯಿ ತಡೆಹಿಡಿದಿದ್ದಾರೆ. ಇದರಲ್ಲಿ ಮಠದ್ದು ಸೇರಿದೆ. ಅದನ್ನ ಮತ್ತೆ ಮಠಕ್ಕೆ ಕೊಡುವ ವಿಶ್ವಾಸ ಇದೆ. ಒಂದು ವೇಳೆ ಅನುದಾನ ಬಿಡುಗಡೆ ಮಾಡದೇ ಇದ್ದರೆ ಬೀದಿಗಿಳಿದು ಹೊರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಜನಗಳಿಂದ ಬಂದಿರೋ ಸರ್ಕಾರ ಇದು. ಯಾಕೆ ಅನುದಾನ ಕೊಡಲ್ಲ. ಭ್ರಷ್ಟಾಚಾರ ಆಗಿದ್ದರೆ ತಡೆಹಿಡಿಯಲಿ. ಅದನ್ನು ಬಿಟ್ಟು ಅನಾವಶ್ಯಕವಾಗಿ ತಡೆಹಿಡಿಯಬಾರದು. ಆದರೂ ಮಠದ ಅನುದಾನ ತಡೆ ತೆರವು ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು. ಕಾಂಗ್ರೆಸ್ ನವರು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದೇ ಜನರಿಗೆ ಮೋಸ ಮಾಡುತಿದ್ದಾರೆ. ಕರ್ನಾಟಕದ ಜನತೆ ಮೋಸ ಹೋಗಿದ್ದಾರೆ. ಕಾಂಗ್ರೆಸ್ ನವರು ಹೇಳಿದಂತೆ ನಾನೂ ಕೂಡ ಕರೆಂಟ್ ಬಿಲ್ ಕಟ್ಟಲ್ಲ. 200 ಯೂನಿಟ್ ವರೆಗೆ ಬಿಲ್ ಕಟ್ಟಲ್ಲ. ನಮ್ಮ ಯಾವ ಕಾರ್ಯಕರ್ತರು ಕರೆಂಟ್ ಬಿಲ್ ಕಟ್ಟಲ್ಲ. ಡಿ.ಕೆ ಶಿವಕುಮಾರ್ ಅವರು ಮನೆ ಯಜಮಾನಿಗೆ 2 ಸಾವಿರ ಹಣ ಕೊಡುತ್ತೇನೆ ಎಂದು ಹೇಳಿದರು. ಈಗ ಅವರಿಗೆ ಸೊಸೆಗೆ ಹಣ ಹಾಕಬೇಕೋ ಅತ್ತೆಗೆ ಹಣ ಹಾಕಬೇಕೋ ಅನ್ನುವ‌ ಗೊಂದಲ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ದಿನದಲ್ಲಿ ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳ ಅನುದಾನ ಬಿಡುಗಡೆ ತಡೆಹಿಡಿದಿದೆ. ಜತೆಗೆ ಆರಂಭವಾಗಬೇಕಿರುವ ಕಾಮಗಾರಿಗಳನ್ನೂ ತಡೆಹಿಡಿಯುವಂತೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಸೋಮವಾರ ಸುತ್ತೋಲೆ ಹೊರಡಿಸಿದ್ದರು. ಇದು ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ಬಿಜೆಪಿ ನಾಯಕರು ಸಹ ಖಂಡಿಸಿದ್ದಾರೆ. ಇನ್ನು ಈ ಬಗ್ಗೆ ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ. ಹಾಸ್ಟೆಲ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು.

 

suddiyaana