ಲೇಟ್ ಆಯ್ತು ಎಂದು ರೈಲ್ವೇ ಪ್ಲಾಟ್ಫಾರ್ಮ್ ಒಳಗೆ ಕಾರು ನುಗ್ಗಿಸಿದ ಬಿಜೆಪಿ ಸಚಿವ!

ರೈಲು ಹತ್ತಲು ತಡವಾಯಿತೆಂದು ಬಿಜೆಪಿ ಸಚಿವರೊಬ್ಬರು ತಮ್ಮ ಕಾರನ್ನೇ ರೈಲ್ವೇ ಪ್ಲಾಟ್ಫಾರ್ಮ್ಗೆ ನುಗ್ಗಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಚಿವನ ಈ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಉತ್ತರಪ್ರದೇಶದ ಪಶು ಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಸೈನಿ ಅವರು ರೈಲು ಹತ್ತಲು ತಡವಾಯಿತು ಎಂದು ತಮ್ಮ ಕಾರನ್ನು ನೇರವಾಗಿ ರೈಲ್ವೇ ಪ್ಲಾಟ್ಫಾರ್ಮಗೆ ನುಗ್ಗಿಸಿದ ಘಟನೆಯೊಂದು ನಡೆದಿದೆ. ಸಚಿವರು ತಮ್ಮ ವಿವಿಐಪಿ ಎಸ್ಯುವಿ ಕಾರನ್ನು ರೈಲು ನಿಲ್ದಾಣದೊಳಗೆ ಚಲಾಯಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅಲ್ಲದೆ ಸಚಿವರ ನಡೆಗೆ ಖಂಡನೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: ಅಮೆರಿಕ ಇತಿಹಾಸದಲ್ಲಿಯೇ ಮೊದಲ ಪ್ರಕರಣ – ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್
ಸಚಿವರು ಕಾರ್ಯಕ್ರಮವೊಂದರ ನಿಮಿತ್ತ ಲಕ್ನೋದಿಂದ ರೈಲಿನಲ್ಲಿ ಬರೇಲಿಗೆ ಪ್ರಯಾಣ ಬೆಳೆಸಲು ಹೌರಾ ಅಮೃತಸರ ಎಕ್ಸ್ ಪ್ರೆಸ್ ರೈಲನ್ನು ಹಿಡಿಯಬೇಕಿತ್ತು. ಹೀಗಾಗಿ ಅವರು ಚಾರ್ಬಾಗ್ ರೈಲು ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ ಸಂಖ್ಯೆ 4ಕ್ಕೆ ರೈಲು ಆಗಮಿಸುತ್ತದೆ. ಆದರೆ ಅವರು ರೈಲ್ವೇ ಪ್ಲಾಟ್ಫಾರ್ಮ್ ಗೆ ಬರೋದು ತಡವಾಗಿತ್ತು. ಈ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ಅಂಗವಿಕಲರಿಗೆ ಮೀಸಲಿಟ್ಟಿದ್ದ ರ್ಯಾಂಪ್ಗೆ ತೆಗೆದುಕೊಂಡು ಹೋಗಿ ಎಸ್ಕಲೇಟರ್ ಮೂಲಕ ನೇರವಾಗಿ ಪ್ಲಾಟ್ ಫಾರ್ಮ್ ಒಳಗೆ ಚಲಾಯಿಸಿದ್ದಾನೆ. ಇದರ ವೀಡಿಯೋ ವೈರಲ್ ಆಗಿದ್ದು, ಈ ರೀತಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ಇತ್ತ ವೈರಲ್ ಆದ ವಿಡಿಯೋ ಕುರಿತು ವಿಪಕ್ಷ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ಸಚಿವರು ಪ್ಲಾಟ್ ಫಾರ್ಮ್ ಗೆ ಬುಲ್ಡೋಜರ್ ಕೊಂಡೊಯ್ಯದಿದ್ದಕ್ಕೆ ಜನರು ಅವರಿಗೆ ಕೃತಜ್ಞರಾಗಿರಬೇಕು ಎಂದು ಟೀಕಿಸಿದ್ದಾರೆ. ಇನ್ನು ಘಟನೆಯ ವಿಡಿಯೋವನ್ನು ಕಾಂಗ್ರೆಸ್ ಕೂಡ ಶೇರ್ ಮಾಡಿಕೊಂಡಿದ್ದು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದೆ.
पशुधन मंत्री धर्मपाल सिंह ट्रेन पकड़ने में हुए लेट तो स्टेशन के प्लेटफार्म तक घुसा दी अपनी कार। इससे लखनऊ के चारबाग स्टेशन के प्लेटफार्म नंबर 1 पर अफरातफरी का मच गई। #DharmpalSingh #Charbhagh @samajwadiparty @AamAadmiParty @yadavakhilesh pic.twitter.com/YOYxqx067e
— Punjab Kesari-UP/UK (@UPkesari) August 24, 2023