ಸ್ಕೂಟರ್ ಗೆ ಡಿಕ್ಕಿ ಹೊಡೆದು, ಯುವತಿಯನ್ನು ಎಳೆದೊಯ್ದ ಕಾರು

ಸ್ಕೂಟರ್ ಗೆ ಡಿಕ್ಕಿ ಹೊಡೆದು, ಯುವತಿಯನ್ನು ಎಳೆದೊಯ್ದ ಕಾರು

ನವದೆಹಲಿ:  ದೆಹಲಿಯ ಕಂಜಾವಾಲಾ ಏರಿಯಾದಲ್ಲಿ ಭಾನುವಾರ ನಸುಕಿನ ವೇಳೆ  ಕಾರೊಂದು ಯೂಟರ್ನ್​ ತೆಗೆದುಕೊಳ್ಳುವ ವೇಳೆ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಕೂಟಿಯಲ್ಲಿದ್ದ ಯುವತಿ ಕಾರಿನ ಅಡಿಗೆ ಬಿದ್ದಿದ್ದಾಳೆ. ಆ ವೇಳೆ ಆಕೆಯ ಬಟ್ಟೆ ಕಾರಿಗೆ ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ ಆ ಕಾರು ಆಕೆಯನ್ನು 13 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು.

ಇದನ್ನೂ ಓದಿ: ಕೇಂದ್ರದ ನೋಟು ಅಮಾನ್ಯೀಕರಣ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಕಾರು ಚಾಲಕ ಅದೇ ರಸ್ತೆಯಲ್ಲಿ, ಹಲವು ಯೂಟರ್ನ್​ ತೆಗೆದುಕೊಂಡು ಯುವತಿಯನ್ನು ಎಳೆದೊಯ್ದಿದ್ದಾನೆ. ಸುಮಾರು ಒಂದೂವರೆ ಗಂಟೆಗಳ ಕಾಲ ಯುವತಿಯನ್ನು ಅದೇ ರಸ್ತೆಯಲ್ಲಿ ಎಳೆದೊಯ್ಯಲಾಗಿದೆ. ಇವೆಲ್ಲವೂ ಬೆಳಗ್ಗಿನ ಜಾವ 3.30ರ ವೇಳೆಗೆ ನಡೆದಿದೆ. ಇನ್ನು ಗಂಭೀರವಾಗಿ ಗಾಯಗೊಂಡ ಯುವತಿ ಕಾರಿನ ಅಡಿಯೇ ಕೊನೆಯುಸಿರೆಳೆದಿದ್ದಾಳೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಕಾರಿನ ಗ್ಲಾಸ್ ಕ್ಲೋಸ್ ಆಗಿತ್ತು. ದೊಡ್ಡದಾಗಿ ಮ್ಯೂಸಿಕ್ ಪ್ಲೇ ಆಗ್ತಿತ್ತು. ಹೀಗಾಗಿ ಏನಾಯ್ತು ಅಂತಾ ಗೊತ್ತಾಗಿಲ್ಲ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

ಘಟನೆ ಬಗ್ಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಘಟನೆಯನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದಿದ್ದಾರೆ. ಅಲ್ಲದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

suddiyaana