ರಕ್ತಸಿಕ್ತ ಬಟ್ಟೆಗಳ ಜೊತೆಗೆ ಜೈನಮುನಿ ಬರೆದ ಡೈರಿಗೂ ಬೆಂಕಿ..! – ಸ್ಫೋಟಕ ಸತ್ಯ ಬಾಯ್ಬಿಟ್ಟ ಪಾಪಿಗಳು..!

ರಕ್ತಸಿಕ್ತ ಬಟ್ಟೆಗಳ ಜೊತೆಗೆ ಜೈನಮುನಿ ಬರೆದ ಡೈರಿಗೂ ಬೆಂಕಿ..! – ಸ್ಫೋಟಕ ಸತ್ಯ ಬಾಯ್ಬಿಟ್ಟ ಪಾಪಿಗಳು..!

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಂಗಳವಾರ ಆದೇಶ ನೀಡಿದೆ. ಒಂದನೇ ಆರೋಪಿ ನಾರಾಯಣ ಮಾಳಿ, ಎರಡನೇ ಆರೋಪಿ ಹಸನ್ ಸಾಬ್ ಅನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ.

ಇದನ್ನೂ ಓದಿ: ಜೈನಮುನಿಯನ್ನ ಒಬ್ಬರಲ್ಲ ಇಬ್ಬರೂ ಸೇರಿ ಕೊಲೆ ಮಾಡಿದ್ರು – ಎಫ್ ಐಆರ್ ನಲ್ಲಿದೆ ಸ್ಫೋಟಕ ಸತ್ಯ

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದ ಅರೋಪಿಗಳನ್ನು ಚಿಕ್ಕೋಡಿ ಠಾಣೆ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಬಾಯ್ಬಿಟ್ಟ ಸತ್ಯ ಕೇಳಿ ಸ್ವತಃ ಪೊಲೀಸರೇ ಶಾಕ್ ಆಗಿದ್ದಾರೆ. ಜೈನಮುನಿಗಳನ್ನು ಕೊಂದ ಪಾಪಿಗಳು, ನಂತರ ಜೈನಮುನಿ ಶವದ ಜತೆ ಡೈರಿ ತೆಗೆದುಕೊಂಡು ಹೋಗಿದ್ದರು. ನಂತರ ಕಟಕಬಾವಿ ಬಳಿಯ ಕಬ್ಬಿನ ಗದ್ದೆಗೆ ಶವ ತಂದಿದ್ದರು. ಬಳಿಕ ಮೃತದೇಹವನ್ನು ತುಂಡು ಮಾಡಿ ಕೊಳವೆಬಾವಿಗೆ ಹಾಕಿದ್ದರು. ನಂತರ ರಕ್ತಸಿಕ್ತ ಬಟ್ಟೆಗಳು, ಡೈರಿಯನ್ನು ಸುಟ್ಟು ಹಾಕಿದ್ದರು ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿರುವ ಪೊಲೀಸರು, ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ.

ಜುಲೈ 5ರಂದು ರಾತ್ರಿ ಜೈನಮುನಿಯನ್ನು ಹತ್ಯೆ ಮಾಡಲಾಗಿತ್ತು. ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್, ಡಿವೈಎಸ್ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತದಲ್ಲಿರುವ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಮಂಗಳವಾರ ಭೇಟಿ ನೀಡಿದೆ. ಪ್ರಕರಣದ ಸತ್ಯಾಸತ್ಯತೆ ಅರಿಯಲು ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಜೈನಮುನಿಗಳ ಪೂರ್ವಾಶ್ರಮದ ಸಂಬಂಧಿಕರ ಜತೆಗೂ ಬಿಜೆಪಿಯ ತಂಡ ಚರ್ಚೆ ನಡೆಸಿದೆ.

suddiyaana