ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿ – ಕಿಡ್ನ್ಯಾಪ್‌ ಮಾಡಿದ ಕಿಡಿಗೇಡಿಗಳು!

ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿ – ಕಿಡ್ನ್ಯಾಪ್‌ ಮಾಡಿದ ಕಿಡಿಗೇಡಿಗಳು!

ಮದುವೆ ಮಾತುಕತೆ ವೇಳೆ ಕೆಲವೊಂದು ಒಪ್ಪಂದಗಳನ್ನು ವರ ಹಾಗೂ ವಧು  ಮನೆಯವರು ಮಾಡಿಕೊಳ್ಳುತ್ತಾರೆ. ಕೆಲವೊಮ್ಮೆ ವರನ ಮನೆಯವರ ಷರತ್ತುಗಳು ವಧು ಮನೆಯವರಿಗೆ ಇಷ್ಟ ಆಗಿಲ್ಲ ಅಂದ್ರೆ ಮದುವೆ ಮಾತುಕತೆಯನ್ನು ಅರ್ಧಕ್ಕೆ ನಿಲ್ಲಿಸಿದ ಉದಾಹಣೆಗಳು ಇವೆ. ಇದೀಗ ಇಲ್ಲೊಂದು ಇಂತಹದ್ದೇ ಘಟನೆ ನಡೆದಿದೆ. ವರನ ಕಡೆಯವರು ಹಾಕಿದ ಮದುವೆ ಒಪ್ಪಂದವನ್ನು ಒಪ್ಪದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿಯನ್ನು ಕಿಡ್ನಾಪ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬಿಟ್ಟೋದ ಗಂಡನನ್ನ ಜೊತೆಯಾಗಿರುವಂತೆ ಮಾಡ್ತೀನಿ ಅಂದ.. ಸಿನಿಮೀಯ ರೀತಿಯಲ್ಲೇ ಮಹಿಳೆಗೆ ಪಂಗನಾಮ ಹಾಕಿ ಎಸ್ಕೇಪ್ ಆದ!

ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಗುರುವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ತೆರಳಲು ಹೊರಟಿದ್ದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಬಂದು ಅಪಹರಣ ಮಾಡಲಾಗಿದೆ. ಶಿಕ್ಷಕಿಯ ಸಂಬಂಧಿ ರಾಮು ಅಪಹರಿಸಿದ್ದಾರೆ ಎಂದು ಆಕೆಯ ಮನೆಯವರು ಆರೋಪಿಸಿದ್ದಾರೆ.

15 ದಿನಗಳ ಹಿಂದೆ ರಾಮು ಮತ್ತು ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಮದುವೆ ಪ್ರಸ್ತಾಪಕ್ಕೆ ಯುವತಿ ಹಾಗೂ ಯುವತಿ ಕುಟುಂಬ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕಿ ಮದುವೆಗೆ ಒಪ್ಪಿಲ್ಲವೆಂದು ಆಕೆಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಗಂಭೀರ ಆರೋಪಿಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Shwetha M