ಅಂಗನವಾಡಿ ಕೇಂದ್ರಕ್ಕೆ ಕೆಲಸಕ್ಕೆ ತೆರಳಿದ್ದ ಪತ್ನಿ ಮನೆಗೆ ಮರಳಲೇ ಇಲ್ಲ – ಪತಿ ಹೋಗಿ ನೋಡಿದಾಗ ಕಂಡಿದ್ದು ಶಾಕಿಂಗ್ ದೃಶ್ಯ

ಅಂಗನವಾಡಿ ಕೇಂದ್ರಕ್ಕೆ ಕೆಲಸಕ್ಕೆ ತೆರಳಿದ್ದ ಪತ್ನಿ ಮನೆಗೆ ಮರಳಲೇ ಇಲ್ಲ – ಪತಿ ಹೋಗಿ ನೋಡಿದಾಗ ಕಂಡಿದ್ದು ಶಾಕಿಂಗ್ ದೃಶ್ಯ

ಮಹಿಳೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಕೆಲಸಕ್ಕೆ ತೆರಳಿದ್ದಳು. ಆದರೆ ಸಂಜೆಯಾದರೂ ಮನೆಗೆ ಮರಳಿರಲಿಲ್ಲ. ಹೀಗಾಗಿ ಪತ್ನಿಯನ್ನ ಹುಡುಕಿಕೊಂಡು ಪತಿ ಅಂಗನವಾಡಿ ಕೇಂದ್ರಕ್ಕೆ ತೆರಳಿದ್ದ. ಆದರೆ ಅಂಗನವಾಡಿ ಕೇಂದ್ರದ ಒಳಗೆ ಕಂಡ ದೃಶ್ಯ ನೋಡಿ ಅಕ್ಷರಶಃ ದಂಗಾಗಿದ್ದ. ಯಾಕಂದ್ರೆ ಕೇಂದ್ರದ ಒಳಗೆ ಪತ್ನಿಯ ಶವ ನೇತಾಡುತ್ತಿತ್ತು.

ಇದನ್ನೂ ಓದಿ : ಮಗಳ ಮದುವೆ ಮಾಡಿಸಿದ್ದ ಫೈವ್ ಸ್ಟಾರ್ ಹೊಟೇಲ್‌ನಲ್ಲೇ ದಂಪತಿ ಆತ್ಮಹತ್ಯೆ – ಡೆತ್‌ ನೋಟ್‌ನಲ್ಲಿ ಬಯಲಾಯ್ತು ಸಾವಿನ ರಹಸ್ಯ!

ಅಂಗನವಾಡಿ ಕೇಂದ್ರದಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಒಡಿಶಾದ ಬಾಲಸೋರ್​ ಜಿಲ್ಲೆಯ ಖಾಂತಪದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಮಹಾರಾಜಪುರ್​ ಏರಿಯಾದ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಮೃತಳನ್ನು ಪ್ರಜ್ಯನಾ ಪರಿಮಿತ ದಾಸ್​ ಎಂದು ಗುರುತಿಸಲಾಗಿದೆ. ಪೊಲೀಸ್​ ಮೂಲಗಳ ಪ್ರಕಾರ ಪರಿಮಿತ ದಾಸ್​ ಎಂದಿನಂತೆ ಶುಕ್ರವಾರ ಬೆಳಗ್ಗೆ ಅಂಗನವಾಡಿ ಕೇಂದ್ರಕ್ಕೆ ತೆರಳಿದಳು. ಸಂಜೆ ಎಲ್ಲರು ಮನೆಗೆ ಹೋದರು ಆಕೆ ಮಾತ್ರ ಮನೆಗೆ ಹಿಂತಿರುಗದನ್ನು ಗಮನಿಸಿ ಆಕೆಯ ಪತಿ ಬಿಸ್ಮಿತ್​ ರಂಜನ್​ ದಾಸ್​, ಅಂಗನವಾಡಿ ಕೇಂದ್ರಕ್ಕೆ ತೆರಳಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿಯನ್ನು ನೋಡಿ ಶಾಕ್​ಗೆ ಒಳಗಾಗಿದ್ದಾನೆ. ತಕ್ಷಣ ಆಕೆಯನ್ನು ಖಾಂತಪದ ಆಸ್ಪತ್ರೆಗೆ ದಾಖಲಿಸಿದಾದರೂ ಆಕೆ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ಘೋಷಣೆ ಮಾಡಿದರು. ಕೌಟುಂಬಿಕ ಸಮಸ್ಯೆಗಳಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಆಕೆಯ ಗಂಡ ಬಿಸ್ಮಿತ್ ಮದ್ಯವ್ಯಸನಿ ಮತ್ತು ಅವನ ಹೆತ್ತವರು ಆಕೆಯನ್ನು ಹಿಂಸಿಸುತ್ತಿದ್ದರು ಹಾಗೂ ಯಾವಾಗಲೂ ಜಗಳವಾಡುತ್ತಿದ್ದರು ಎಂದು ಆರೋಪ ಮಾಡಿದ್ದಾರೆ.

ಪರಿಮಿತ ದಾಸ್​ ಆತ್ಮಹತ್ಯೆ ಮಾಡಿಕೊಳ್ಳಲು ಯಾವುದೇ ಕಾರಣವಿರಲಿಲ್ಲ. ನನ್ನ ಮಗಳು ಮಾನಸಿಕವಾಗಿ ತುಂಬಾ ಶಕ್ತಿಯುತಳಾಗಿದ್ದಳು. ಆಕೆಯ ಪತಿ ಮದ್ಯವ್ಯಸನಿ ಮತ್ತು ಆಕೆಯ ಅತ್ತೆ ದುಷ್ಟ ಮಹಿಳೆ. ಅವರು ನನ್ನ ಮಗಳನ್ನು ಹಿಂಸಿಸಿ ಕೊಂದಿದ್ದಾರೆ ಎಂದು ಮೃತಳ ತಾಯಿ ಸರಸ್ವತಿ ದಾಸ್ ಆರೋಪಿಸಿದ್ದಾರೆ. ಸಾವಿನ ಬಗ್ಗೆ ಮಾಹಿತಿ ಪಡೆದ ಖಾಂತಪದ ಪೊಲೀಸರು ಸ್ಥಳಕ್ಕಾಗಮಿಸಿ ಬಿಸ್ಮಿತ್ ಹಾಗೂ ಆತನ ತಾಯಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

suddiyaana