ಇಂದಿರಾ ಕ್ಯಾಂಟೀನ್ ನಲ್ಲಿ ಪೌಷ್ಠಿಕಾಂಶದ ಆಹಾರ ನೀಡಲು ಚಿಂತನೆ – ಇನ್ಮುಂದೆ ಊಟದ ಜೊತೆ ಮೊಟ್ಟೆ

ಇಂದಿರಾ ಕ್ಯಾಂಟೀನ್ ನಲ್ಲಿ ಪೌಷ್ಠಿಕಾಂಶದ ಆಹಾರ ನೀಡಲು ಚಿಂತನೆ – ಇನ್ಮುಂದೆ ಊಟದ ಜೊತೆ ಮೊಟ್ಟೆ

ಸಿದ್ದರಾಮಯ್ಯರ ಕನಸಿನ ಕೂಸು ಇಂದಿರಾ ಕ್ಯಾಂಟೀನ್. ಕಳೆದ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಈ ಯೋಜನೆ ಬಿಜೆಪಿ ಅವಧಿಯಲ್ಲಿ ತೆರೆಮರೆಗೆ ಸರಿದಿತ್ತು. ಇನ್ನೇನು ಎಲ್ಲಾ ಕ್ಯಾಂಟೀನ್​ಗಳಿಗೆ ಬೀಗ ಬೀಳುತ್ತೆ ಅನ್ನುವಷ್ಟರಲ್ಲೇ ಸಿಎಂ ಸಿದ್ದರಾಮಯ್ಯ ಕ್ಯಾಂಟೀನ್​ಗಳಿಗೆ ಮರುಜೀವ ನೀಡಲು ಮುಂದಾಗಿದ್ದಾರೆ. ಈಗಾಗಲೇ ಗುಣಮಟ್ಟ, ಶುಚಿ, ರುಚಿ ಬಗ್ಗೆ ಹೆಚ್ಚು ಗಮನ ಕೊಡಲು ತಿಳಿಸಿದ್ದಾರೆ.

ಇದನ್ನೂ ಓದಿ : ಊಟಕ್ಕೆ ಮಟನ್ ಖಾಲಿಯಾಗಿದ್ದಕ್ಕೆ ತಾಳಿಕಟ್ಟಲ್ಲ ಅಂದ ವರ – ನಿನ್ನನ್ನು ಯಾವ ಕಾರಣಕ್ಕೂ ಮದುವೆಯಾಗಲ್ಲ ಅಂದಳು ಸಿಟ್ಟಿಗೆದ್ದ ವಧು

ಇದೀಗ ಕ್ಯಾಂಟೀನ್ ಗಳಲ್ಲಿ ಊಟ ಮಾಡುವವರಿಗೆ ಮೊಟ್ಟೆ ಕೂಡ ಸಿಗಲಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಇನ್ನು ಮುಂದೆ ಮೊಟ್ಟೆ ನೀಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಸಿಎಂ ಸೂಚನೆ ಬೆನ್ನಲ್ಲೇ ಅನೇಕ ತಜ್ಞರು ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರಕ್ಕೆ ಕೋಳಿ ಮೊಟ್ಟೆ ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಡ, ಶ್ರಮಿಕ‌ ವರ್ಗದವರಿಗೆ ಕೋಳಿ ಮೊಟ್ಟೆ ಉತ್ತಮ ಪೌಷ್ಟಿಕಾಂಶ. ಹೀಗಾಗಿ ಕಾಂಗ್ರೆಸ್, ಬಿಬಿಎಂಪಿಯ ಮಾಜಿ ಸದಸ್ಯರು ಕೋಳಿ ಮೊಟ್ಟೆಗೆ ಒತ್ತಾಯಿಸಿದ್ದಾರೆ. ವಾರದಲ್ಲಿ ಮೂರು ದಿನವಾದ್ರೂ ಕೋಳಿ ಮೊಟ್ಟೆ ನೀಡುವಂತೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡಾ ಇಂದಿರಾ ಕ್ಯಾಂಟೀನ್ ನಲ್ಲಿ ಪೌಷ್ಠಿಕಾಂಶ ಆಹಾರಕ್ಕೆ ಸಲಹೆ ನೀಡಿದ್ದರು. ಇಂದಿರಾ ಕ್ಯಾಂಟೀನ್‌ ಫುಡ್ ಮೆನು ಬದಲಾವಣೆಗೆ ಸಾರ್ವಜನಿಕರು ಒತ್ತಾಯ ಮಾಡಿದ್ದರು. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯನವರೇ ಪುಡ್ ಮೆನು ನಿರ್ಧಾರಕ್ಕೆ ಮುಂದಾಗಿದ್ದರು. ಸದ್ಯ ಈಗ ಅಪೌಷ್ಟಿಕತೆ ಹೋಗಲಾಡಿಸಲು ಕಡಿಮೆ ಬೆಲೆಯಲ್ಲಿ ಮೊಟ್ಟೆ ವಿತರಿಸುವಂತೆ ಮಾಜಿ ಸದಸ್ಯ ಅಬ್ದುಲ್ ವಾಜೀದ್ ಸಿಎಂಗೆ ಪತ್ರ ಬರೆದು ಮನವಿಗೆ ಮುಂದಾಗಿದ್ದಾರೆ.

suddiyaana