ಬಿಟ್ಟೋದ ಗಂಡನನ್ನ ಜೊತೆಯಾಗಿರುವಂತೆ ಮಾಡ್ತೀನಿ ಅಂದ.. ಸಿನಿಮೀಯ ರೀತಿಯಲ್ಲೇ ಮಹಿಳೆಗೆ ಪಂಗನಾಮ ಹಾಕಿ ಎಸ್ಕೇಪ್ ಆದ!

ಬಿಟ್ಟೋದ ಗಂಡನನ್ನ ಜೊತೆಯಾಗಿರುವಂತೆ ಮಾಡ್ತೀನಿ ಅಂದ.. ಸಿನಿಮೀಯ ರೀತಿಯಲ್ಲೇ ಮಹಿಳೆಗೆ ಪಂಗನಾಮ ಹಾಕಿ ಎಸ್ಕೇಪ್ ಆದ!

ಒಬ್ಬ ವ್ಯಕ್ತಿಯ ವೀಕ್‌ನೆಸ್‌ ಏನು ಅಂತಾ ಗೊತ್ತಾದ್ರೆ ಜನ ಏನ್‌ ಬೇಕಾದ್ರೂ ಮಾಡ್ತಾರೆ. ಅದನ್ನೇ ಬಂಡವಾಳವಾಗಿಟ್ಟುಕೊಂಡು ಆಟ ಆಡ್ತಾರೆ. ಆಗಿರೋ ಸಮಸ್ಯೆ ಬಗೆಹರಿಸುತ್ತೇನೆ ಅಂತಾ ಹೇಳಿ ವಂಚನೆ ಮಾಡುತ್ತಾರೆ. ಇದೀಗ ಇಲ್ಲೊಬ್ಬ ವ್ಯಕ್ತಿ ಬಿಟ್ಟು ಹೋದ ಗಂಡನನ್ನು ಜೊತೆಯಾಗಿರುವಂತೆ ಮಾಡುತ್ತೇನೆ ಅಂತಾ ಹೇಳಿ ಮಹಿಳೆಯಿಂದ ಲಕ್ಷ ಲಕ್ಷ ಹಣ ಪಡೆದು ಆಕೆಗೆ ಪಂಗನಾಮ ಹಾಕಿದ್ದಾನೆ.

ಹೌದು, ಈ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬಿಟ್ಟು ಹೋದ ಗಂಡನನ್ನು ಜೊತೆಯಾಗಿರುವಂತೆ ಮಾಡುತ್ತೇನೆ ಎಂದು ಮಹಿಳೆಯೊಬ್ಬರಿಗೆ ಸಿನಿಮೀಯ ರೀತಿಯಲ್ಲಿ ವಂಚಿಸಿದ್ದಾನೆ. ಫಾತಿಮಾ ಎಂಬ ಮಹಿಳೆಗೆ ಹಜರತ್ ನೂರ್ ಮೊಹಮ್ಮದ್ ಎಂಬಾತ ವಂಚಿಸಿರುವುದು ಬಯಲಾಗಿದೆ.

ಇದನ್ನೂ ಓದಿ: ವಿಮಾನದಲ್ಲೇ ದಂಪತಿ ಮಧ್ಯೆ ಮಾರಾಮಾರಿ – ಬ್ಯಾಂಕಾಕ್‍ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!

ನೀರಾವರಿ ಇಲಾಖೆಯಲ್ಲಿ ಎಫ್‍ಡಿಎ ಅಧಿಕಾರಿಯಾಗಿರೋ ಫಾತಿಮಾ ಪತಿ ಬಿಟ್ಟೋಗಿದ್ದು, ಮೂರು ವರ್ಷದ ಮಗುವಿನ ಕೈಗೆ ಗಾಯದ ಸಮಸ್ಯೆಯಿತ್ತು. ಪಕ್ಕದ ಮನೆಯರ ಮಾತು ಕೇಳಿ ನಾಗಮಂಗಲದಲ್ಲಿರೋ ಹಜರತ್ ನೂರ್ ಸಂಪರ್ಕ ಮಾಡಿ ಔಷಧಿ ಕೊಡಿಸಿದ್ರು. ಕಾಕತಾಳಿಯ ಎಂಬಂತೆ ಮಗುವಿಗೆ ಕೈ ಒಂದು ವಾರದಲ್ಲಿ ಸರಿಹೋಗಿತ್ತು.

ಮಗನ ಕೈ ಸರಿಹೋಗುತ್ತಿದ್ದಂತೆ ಹಜರತ್ ನನ್ನು ಸಂಪೂರ್ಣ ನಂಬಿದ್ದ ಫಾತಿಮಾ, ಪತಿಯನ್ನ ತನ್ನ ಜೊತೆಗಿರುವಂತೆ ಮಾಡಿ ಎಂದು ಕೇಳಿಕೊಂಡಿದ್ದಳು.  ಗಂಡ ನಿನ್ನ ಜೊತೆಗೇ ಇರುವಂತೆ ಮಾಡ್ತೀನಿ ಅಂತ ಹಜರತ್ ನೂರ್ ಒಂದು ಲಕ್ಷ ಹಣ ಪಡೆದಿದ್ದ. ಆ ಬಳಿಕ ವೈಯಕ್ತಿಕ ಸಮಸ್ಯೆಯಿದೆ ಎಂದು ಲೋನ್ ಮಾಡಿಸಿ ಏಳು ಲಕ್ಷ ಪಡೆದಿದ್ದ. ಪ್ರತಿ ತಿಂಗಳು ಇಂತಿಷ್ಟು ಹಣ ಕಟ್ಟುತ್ತೇನೆ ಅಂತೇಳಿ ಹಣ ಕೈಗೆ ಬಂದ ತಕ್ಷಣ ಎಸ್ಕೇಪ್ ಆಗಿದ್ದಾನೆ. ಸದ್ಯ ವಂಚನೆ ಕೇಸ್‍ನಲ್ಲಿ ಶಿರಾ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shwetha M