ಗಂಡನ ಕೊಂದವರನ್ನು 3 ತಿಂಗಳಲ್ಲಿ ಬಿಡುಗಡೆ ಮಾಡಿದರೆ ಕತ್ತು ಕೊಯ್ದುಕೊಳ್ಳುವೆ ಎಂದ ಮೃತನ ಪತ್ನಿ..!

ಗಂಡನ ಕೊಂದವರನ್ನು 3 ತಿಂಗಳಲ್ಲಿ ಬಿಡುಗಡೆ ಮಾಡಿದರೆ ಕತ್ತು ಕೊಯ್ದುಕೊಳ್ಳುವೆ ಎಂದ ಮೃತನ ಪತ್ನಿ..!

ಹನುಮ ಜಯಂತಿ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು ಎಂದು ಪತ್ನಿ ವೇಣುಗೋಪಾಲ್ ಪತ್ನಿ ಆಗ್ರಹಿಸಿದ್ದಾರೆ. ನನ್ನ ಗಂಡನನ್ನು ಕೊಲೆ ಮಾಡಿದ ಆರೋಪಿಗಳು ಒಂದು ವೇಳೆ ಜೈಲಿನಿಂದ ಮೂರು ತಿಂಗಳೊಳಗೆ ಬಿಡುಗಡೆಯಾಗಿ ಬಂದರೆ ನಾನು ಕತ್ತು ಕುಯ್ದುಕೊಂಡು ಸಾಯುತ್ತೇನೆ ಎಂದು ಅಳಲು ತೋಡಿಕೊಂಡಿದ್ದಾರೆ. ಮತ್ತೊಂದೆಡೆ ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆಗೆ ಇಳಿದಿದ್ದ ಬಿಜೆಪಿಗೆ ಆರಂಭದಲ್ಲೇ ಶಾಕ್ ಎದುರಾಗಿದೆ.

ಇದನ್ನೂ ಓದಿ: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಯೇ ಬಿಜೆಪಿಗೆ ಅಸ್ತ್ರ – ಮೃತನ ಮನೆಗೆ ಬಿಜೆಪಿ ನಾಯಕರ ನಿಯೋಗ ಭೇಟಿ

ಮೃತ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಿವಾಸಕ್ಕೆ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಭೇಟಿ ನೀಡಿದರು. ಇವರ ಮುಂದೆ ಅಳಲು ತೋಡಿಕೊಂಡ ಮೃತ ವೇಣುಗೋಪಾಲ್ ಪತ್ನಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ಮೂರೇ ತಿಂಗಳಿಗೆ ಆರೋಪಿಗಳು ಹೊರಗೆ ಬಂದ್ರೆ ನಾನು ಮತ್ತು ಮಗಳು ಕತ್ತು ಕೊಯ್ದುಕೊಂಡು ಸಾಯುತ್ತೇವೆ ಎಂದಿದ್ದಾರೆ. ನಾನು ಕುರುಬ ಸಮುದಾಯಕ್ಕೆ ಸೇರಿದವಳು. ನನ್ನ ಗಂಡ ನಾಯಕ ಸಮುದಾಯಕ್ಕೆ ಸೇರಿದವನು. ಇಬ್ಬರು ಪ್ರೀತಿಸಿ ಮದುವೆ ಆಗಿದ್ದೆವು. ಕಳೆದ 7 ವರ್ಷ ಜೀವನ ಸಾಗಿಸಿದ್ದೇನೆ. ಈಗ ನನಗೆ ಯಾರು ಗತಿ ಎಂದು ಅಳಲು ತೋಡಿಕೊಂಡಿದ್ದಾಳೆ. ವೈಯಕ್ತಿಕವಾಗಿ ಧನ ಸಹಾಯ ಮಾಡಿದ ಸುನೀಲ್ ಬೋಸ್  ಮಾತನಾಡಿ, ಜಿಲ್ಲಾಧಿಕಾರಿಗಳು ನನಗೆ ಎಲ್ಲಾ ಹೇಳಿದ್ದಾರೆ. ನನ್ನ ತಂದೆಯವರಿಗೆ ಹೇಳಿ ಗರಿಷ್ಠ ಪರಿಹಾರ ಸಿಗುವಂತೆ ಮಾಡುತ್ತೇನೆ ಎಂದು ವೇಣುಗೋಪಾಲ್ ಪತ್ನಿಗೆ ಸುನೀಲ್ ಬೋಸ್ ಭರವಸೆ ನೀಡಿದರು.

ಮತ್ತೊಂದೆಡೆ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆಗೆ ಇಳಿದಿದ್ದ ಬಿಜೆಪಿಗೆ ಆರಂಭದಲ್ಲೇ ಶಾಕ್ ಎದುರಾಗಿದೆ. ಕೊಲೆ ಪ್ರಕರಣದ ನಾಲ್ಕನೇ ಆರೋಪಿಯು ನಗರ ಪಾಲಿಕೆಯ ಬಿಜೆಪಿ ಸದಸ್ಯೆಯೊಬ್ಬರ ಸಹೋದರ ಎಂಬುದು ತಿಳಿದುಬಂದಿದೆ. ಪ್ರಕರಣದ

ನಾಲ್ಕನೇ ಆರೋಪಿ ಶಂಕರ್ ಅಲಿಯಾಸ್ ತುಪ್ಪಾ ಮೈಸೂರು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯೆಯ ಸಹೋದರ. ಪ್ರಕರಣದ ಎ1 ಆರೋಪಿ ಮಣಿಕಂಠ, ಸಂದೇಶ-ಎ2, ಅನಿಲ್-ಎ3, ಶಂಕರ್ ಅಲಿಯಾಸ್ ತುಪ್ಪಾ-ಎ4, ಮಂಜು-ಎ5, ಹ್ಯಾರಿಸ್-ಎ6 ಆರೋಪಿಗಳಾಗಿದ್ದಾರೆ.

suddiyaana