ಒಡಿಶಾದಲ್ಲಿ ಭೀಕರ ರೈಲು ದುರಂತ – 280 ರ ಗಡಿ ದಾಟಿದ ಸಾವಿನ ಸಂಖ್ಯೆ

ಒಡಿಶಾದಲ್ಲಿ ಭೀಕರ ರೈಲು ದುರಂತ – 280 ರ ಗಡಿ ದಾಟಿದ ಸಾವಿನ ಸಂಖ್ಯೆ

ಒಡಿಶಾದ ಬಾಲಸೋರ್‌ ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ. ಈ ಭೀಕರ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 288 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ರೈಲು ದುರಂತಕ್ಕೆ ಮರುಗಿದ ಕ್ರಿಕೆಟಿಗರು – ಟ್ವೀಟ್ ಮೂಲಕ ನೊಂದ ಕುಟುಂಬಗಳಿಗೆ ಸಂತಾಪ

ದೇಶದಲ್ಲೇ ಅತ್ಯಂತ ಭೀಕರ ರೈಲು ಅಪಘಾತ ಇದಾಗಿದ್ದು, ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ಇರುವ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ದುರಂತದಲ್ಲಿ ಗಾಯಗೊಂಡ ಪ್ರಯಾಣಿಕರು ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್‌ಇಆರ್ ರೈಲ್ವೆ ವಕ್ತಾರ ಆದಿತ್ಯ ಚೌಧರಿ ಹೇಳಿದ್ದಾರೆ. ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ (ಸಿಆರ್‌ಎಸ್) ಆಯುಕ್ತರಿಂದ ಅಪಘಾತದ ವಿಚಾರಣೆ ನಡೆಯಲಿದೆ. ಅಲ್ಲದೇ ರೈಲ್ವೆ ಸಚಿವಾಲಯ ಈಗಾಗಲೇ ಘಟನೆಯ ತನಿಖೆಗೆ ಆದೇಶಿಸಿದೆ.

suddiyaana