ಹಳಿ ತಪ್ಪಿ ಉರುಳಿದ ರೈಲು- ನಾಲ್ವರು ಪ್ರಯಾಣಿಕರು ದುರ್ಮರಣ, 80ಕ್ಕೂ ಹೆಚ್ಚು ಮಂದಿಗೆ ಗಾಯ

ಹಳಿ ತಪ್ಪಿ ಉರುಳಿದ ರೈಲು- ನಾಲ್ವರು ಪ್ರಯಾಣಿಕರು ದುರ್ಮರಣ, 80ಕ್ಕೂ ಹೆಚ್ಚು ಮಂದಿಗೆ ಗಾಯ

ಇಡಿಶಾ ರೈಲು ದುರಂತ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಅಪಘಾತ ಸಂಭವಿಸಿದೆ. ಬಿಹಾರದ ಬಾಸ್ಕರನಳ್ಳಿ  ರೈಲು ಹಳಿ ತಪ್ಪಿ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಸುಮಾರು 80ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ದೆಹಲಿಯ ಆನಂದ್ ವಿಹಾರ್ ಟರ್ಮಿನಲ್‍ನಿಂದ ಅಸ್ಸಾಂನ ಕಾಮಾಖ್ಯಕ್ಕೆ ತೆರಳುತ್ತಿದ್ದ ಈಶಾನ್ಯ ಎಕ್ಸ್‍ಪ್ರೆಸ್ ರೈಲು ಬಾಸ್ಕರನ ರಘುನಾಥಪುರ ಬಳಿ ಬುಧವಾರ ತಡ ರಾತ್ರಿ ಹಳಿ ತಪ್ಪಿದೆ. ಪರಿಣಾಮ 6 ಕ್ಕೂ ಹೆಚ್ಚು ಭೋಗಿಗಳು ಉರುಳಿಬಿದ್ದಿದೆ.  ದುರಂತದಲ್ಲಿ 80ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಸ್ಥಳೀಯ ಅಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಯುದ್ಧ ಪೀಡಿತ ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ʼಅಪರೇಷನ್ ಅಜಯ್ʼ ಆರಂಭಿಸಿದ ಕೇಂದ್ರ ಸರ್ಕಾರ

ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವೀಟ್‌ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣ ತೆರವು ಮತ್ತು ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಎಲ್ಲಾ ಕೋಚ್‍ಗಳನ್ನು ಪರಿಶೀಲಿಸಲಾಗಿದೆ. ಪ್ರಯಾಣಿಕರನ್ನು ಅವರ ಮುಂದಿನ ಪ್ರಯಾಣಕ್ಕಾಗಿ ಶೀಘ್ರದಲ್ಲೇ ವಿಶೇಷ ರೈಲಿಗೆ ಸ್ಥಳಾಂತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ವೇಗಗೊಳಿಸಲು ವಿಪತ್ತು ನಿರ್ವಹಣಾ ಇಲಾಖೆ, ಆರೋಗ್ಯ ಇಲಾಖೆ ಮತ್ತು ಬಕ್ಸರ್ ಮತ್ತು ಭೋಜ್‍ಪುರದ ಜಿಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಆಸ್ಪತ್ರೆಗೆಳು ಅಲರ್ಟ್ ಆಗಿರುವಂತೆ ಹೇಳಿದ್ದಾರೆ. ಹೆಲ್ಪ್‍ಲೈನ್ ಸಹ ನೀಡಲಾಗಿದೆ ಎಂದು ಹೇಳಿದ್ದಾರೆ.

Shwetha M