ಎಂಡಿ, ಚೀಫ್ ಇಂಜಿನಿಯರ್​ಗೆ ಎಷ್ಟು ಫಿಕ್ಸ್‌ ಮಾಡಿದ್ದೀರಿ? – ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಎಂಡಿ, ಚೀಫ್ ಇಂಜಿನಿಯರ್​ಗೆ ಎಷ್ಟು ಫಿಕ್ಸ್‌ ಮಾಡಿದ್ದೀರಿ? – ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ತುಂಗಭದ್ರಾ ಜಲಾಶಯದ ಗೇಟ್​ನ ಚೈನ್​ ಲಿಂಕ್​ ಕಟ್ ಆಗಿದೆ. ನದಿಗೆ 60 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ. ರಾಜ್ಯ ಸರ್ಕಾರ ಕೂಡ ಈ ಬಗ್ಗೆ ತಜ್ಞರ ಜೊತೆ ಸಮಾಲೋಚನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಇದೀಗ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮೊಸಳೆ ಬಾಯಿಗೆ ಆಹಾರವಾಗುತ್ತಿದ್ದ ಮರಿಯನ್ನ ರಕ್ಷಿಸಿದ ತಾಯಿ ಆನೆ – ಅಬ್ಬಬ್ಬಾ.. ರೋಚಕ ದೃಶ್ಯ ಸೆರೆ!

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ತುಂಗಭದ್ರಾ ಡ್ಯಾಂಗೆ 70 ವರ್ಷ ಆಗಿದೆ. ಇದು ಟಿಬಿ ಬೋರ್ಡ್​ಗೆ ಬರುತ್ತದೆ. ಆಂಧ್ರ, ಕೇಂದ್ರ ಸರ್ಕಾರದ ಜವಾಬ್ದಾರಿ ಇದೆ. ಈ ಕುರಿತು ರಿಪೊರ್ಟ್ ಕೊಡೊದಕ್ಕೆ ಎಂದು ಒಂದು ಕಮಿಟಿ ಇದೆ. 122 ಟಿಎಂಸಿ ನಮ್ಮ ರಾಜ್ಯಕ್ಕೆ ಸಿಗಬೇಕು, 73 ಟಿಎಂಸಿ ನೀರು ಆಂಧ್ರಕ್ಕೆ ಸಿಗಬೇಕು. 103 ಟಿಎಂಸಿ ಈಗ ಸಿಗ್ತಿದೆ. ಇನ್ನು ದುಡ್ಡು ಕೊಟ್ಟು ಬಂದವನು ಈ ಡ್ಯಾಂ ಏನಾಗಿದೆ, ಗೇಟ್ ಏನಾಗಿದೆ ಅಂತಾ ಯಾಕೆ ನೋಡ್ತಾನೆ ಎಂದರು. ಈಗ ತರಾತುರಿಯಲ್ಲಿ ರಿಪೇರಿ ಮಾಡೋದಕ್ಕೆ ಹೋಗಿ ಮತ್ತೆ ಏನೇನೋ ಅವಾಂತರ ಆಗುವುದು ಬೇಡ, ರೈತರಿಗೆ ಕಾನ್ಫಿಡೆನ್ಸ್ ಬರುವಂತೆ ಮಾಡಿ. ನಿಮ್ಮ ಊಹೆ ಮೇಲೆ ನಿರ್ಧಾರ ಮಾಡಿ ರೈತರ ಬೆಳೆ ನಷ್ಟ ಮಾಡಬೇಡಿ ಎಂದು ಕೈ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಸೇಫ್ಟಿ ಮೆಜಾರಿಟಿ ಕಮಿಟಿಗೆ ಒಂದು ಫಾರ್ಮೇಟ್ ಕೊಟ್ಟಿರುತ್ತಾರೆ. ಪ್ರತಿಯೊಂದು ವಸ್ತುಗಳನ್ನು ಚೆಕ್ ಮಾಡಬೇಕು. ಪ್ರತಿವರ್ಷ ಲೂಬ್ರಿಕೇಷನ್ ಮಾಡಬೇಕಾಗುತ್ತದೆ. ಈ ಹಿನ್ನಲೆ ಕೇಂದ್ರ ಸರ್ಕಾರ 2021 ರಲ್ಲಿ ಹೊಸ ಕಾನೂನು ತಂದರು, ಇದರ ಪ್ರಕಾರ ಕೇಂದ್ರ ಸರ್ಕಾರದಿಂದ ಒಬ್ಬ , ರಾಜ್ಯ ಸರ್ಕಾರದಿಂದ ಒಬ್ಬ ಅಧಿಕಾರಿ ಇರುತ್ತಾರೆ. ಚೀಫ್ ಇಂಜಿನಿಯರ್​ನ ನೇಮಕ ಮಾಡೋಕೆ ಎಷ್ಟೆಷ್ಟು ಫಿಕ್ಸ್ ಮಾಡಿದ್ದಿರಾ ಅದನ್ನ ನಿಲ್ಲಿಸಿ. ಇದನೆಲ್ಲಾ ನಾನು ಅನುಭವಿಸಿದ್ದೇನೆ. ಎಂಡಿ, ಚೀಫ್ ಇಂಜಿನಿಯರ್​ಗೆ ಇಷ್ಟು ಅಂತಾ ಫಿಕ್ಸ್ ಮಾಡಿದ್ದಾರೆ ಎಂದು ಕಿಡಿಕಾರಿದರು.

Shwetha M

Leave a Reply

Your email address will not be published. Required fields are marked *