KSRTC ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್ – ಜೆಡಿಎಸ್ ಮಾಜಿ ಶಾಸಕ ಆಂಬುಲೆನ್ಸ್ ತಡೆದ ದೃಶ್ಯ ವೈರಲ್

KSRTC ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್ – ಜೆಡಿಎಸ್ ಮಾಜಿ ಶಾಸಕ ಆಂಬುಲೆನ್ಸ್ ತಡೆದ ದೃಶ್ಯ ವೈರಲ್

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕೆಎಸ್​ ಆರ್​ಟಿಸಿ ಬಸ್ ಡಿಪೋ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಾಜಿ ಶಾಸಕ ಸುರೇಶ್ ಗೌಡ  (Suresh Gowda) ಹಾಗೂ ಜೆಡಿಎಸ್ (JDS) ಕಾರ್ಯಕರ್ತರು ಆಂಬುಲೆನ್ಸ್ (Ambulence) ತಡೆದಿದ್ದರು ಎಂದು ಸಚಿವ ಚಲುವರಾಯಸ್ವಾಮಿ (Chaluvaraya Swamy) ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯವನ್ನು ಜೆಡಿಎಸ್ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ :  ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ಗೆ ಲಘು ಹೃದಯಾಘಾತ – ಶ್ರೀಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್‌

ನಾಗಮಂಗಲದ ಕೆಎಸ್‌ಆರ್‌ಟಿಸಿ ಡ್ರೈವರ್ ಜಗದೀಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದ ಆಂಬುಲೆನ್ಸ್ ನ ಮಾಜಿ ಶಾಸಕ ಸುರೇಶ್ ಗೌಡ ಹಾಗೂ ಬೆಂಬಲಿಗರು ಅಡ್ಡಗಟ್ಟುವ ದೃಶ್ಯ ಪತ್ತೆಯಾಗಿದೆ. ನಾಗಮಂಗಲ ಟಿಬಿ ವೃತ್ತದ ಬಳಿ ಸುರೇಶ್‌ಗೌಡ ಅಡ್ಡಗಟ್ಟಿ ನಿಲ್ಲಿಸಿದ್ದರು. ಬಳಿಕ ಆಂಬುಲೆನ್ಸ್ ನಲ್ಲಿದ್ದವರೊಂದಿಗೆ ಸುರೇಶ್ ಗೌಡ ಮಾತನಾಡಿದ್ದರು. ಈ ಘಟನೆ ಜುಲೈ 6ರ ಮಧ್ಯರಾತ್ರಿ 1 ಗಂಟೆ ವೇಳೆ ನಡೆದಿದೆ. ಮಾಜಿ ಶಾಸಕ ಸುರೇಶ್‌ಗೌಡ ಹಾಗೂ ಜೆಡಿಎಸ್ ಕಾರ್ಯಕರ್ತರು ಆಂಬುಲೆನ್ಸ್ ತಡೆದಿದ್ದರು. ಜಗದೀಶ್‌ನನ್ನು ಬಿಜಿಎಸ್ ಆಸ್ಪತ್ರೆಯಿಂದ ಮೈಸೂರಿಗೆ ರವಾನೆ ಮಾಡುವಾಗ ತಡೆದಿದ್ದಾರೆ. ಅವರಿಗೆ ಜಗದೀಶ್ ಬದುಕಿಸುವ ಉದ್ದೇಶ ಇರಲಿಲ್ಲ ಎಂದು ಚಲುವರಾಯಸ್ವಾಮಿ ಆರೋಪಿಸಿದ್ದರು.

ಇದಾದ ಬಳಿಕ ನಮ್ಮ ಕಾರ್ಯಕರ್ತರು ಆಂಬುಲೆನ್ಸ್ ಅಡ್ಡಗಟ್ಟಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಇದೀಗ ಘಟನೆಗೆ ಸಂಬಂಧಿಸಿಂತೆ ವಿಡಿಯೋ ಬಿಡುಗಡೆ ಮಾಡಿರುವ ಜೆಡಿಎಸ್, ನಾವು ಜಗದೀಶ್‌ನನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ವಿಚಾರಿಸಲು ಆಂಬುಲೆನ್ಸ್ ನಿಲ್ಲಿಸಿದ್ದೆವು ಎಂದು ಸ್ಪಷ್ಟಪಡಿಸಿದೆ. ಜಗದೀಶ್‌ನನ್ನ ಎಲ್ಲಿಗೆ ಕರೆದುಕೊಂಡು ಹೋಗ್ತಾ ಇದ್ದೀರಾ? ಬಿಜಿಎಸ್‌ನಲ್ಲಿ ಚಿಕಿತ್ಸೆ ಕೊಡೋಕೆ ಆಗಲ್ವಾ? ಮಣಿಪಾಲ್‌ಗೆ ಕರೆದುಕೊಂಡು ಹೋಗ್ತಾ ಇದ್ದೀರಾ? ಸರಿ ಹೋಗಿ ಎಂದು ಸುರೇಶ್ ಗೌಡ ಮಾತನಾಡಿರುವ ವೀಡಿಯೋ ರಿಲೀಸ್ ಆಗಿದೆ.

suddiyaana