‘ಗುಂಬಜ್ ತೆರವು ಮಾಡಲು ಜಿಲ್ಲಾಡಳಿತದ ಅನುಮತಿ ಬೇಕಿಲ್ಲ’ –ಸಂಸದ ಪ್ರತಾಪ್ ಸಿಂಹ ಗುಡುಗು
ಗುಂಬಜ್ ಮೇಲೆ ಕಳಸ ಹೇಗೆ ಬಂತು ?- ಸಂಸದ ಪ್ರತಾಪ್ ಸಿಂಹ ಪ್ರಶ್ನೆ

‘ಗುಂಬಜ್ ತೆರವು ಮಾಡಲು ಜಿಲ್ಲಾಡಳಿತದ ಅನುಮತಿ ಬೇಕಿಲ್ಲ’ –ಸಂಸದ ಪ್ರತಾಪ್ ಸಿಂಹ ಗುಡುಗುಗುಂಬಜ್ ಮೇಲೆ ಕಳಸ ಹೇಗೆ ಬಂತು ?- ಸಂಸದ ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಬಸ್ ನಿಲ್ದಾಣದ ಶೆಲ್ಟರ್ ಮೇಲಿರುವ ಗುಂಬಜ್ ತೆರವು ಮಾಡದಿದ್ದರೆ, ನಾನೇ ತೆರವು ಮಾಡುತ್ತೇನೆ. ಇದಕ್ಕೆ ಜಿಲ್ಲಾಡಳಿತದ ಅನುಮತಿ ಬೇಕಿಲ್ಲ ಅಂತಾ ಸಂಸದ ಪ್ರತಾಪ್ ಸಿಂಹ ಮತ್ತೊಮ್ಮೆ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ‘ಗುಂಬಜ್ ತೆರವಿಗೆ ನಾನು ನೀಡಿದ ಎರಡು ದಿನದ ಗಡುವು ಮುಗಿದಿದೆ. ಬಸ್ ನಿಲ್ದಾಣದ ಶೆಲ್ಟರ್ ತೆರವು ಮಾಡವುದಿಲ್ಲ. ಅದರ ಮೇಲಿನ ಗುಂಬಜ್ ಮಾತ್ರ ತೆರವು ಮಾಡುತ್ತೇನೆ. ನಾನು ಹೇಳಿಕೆ ಕೊಡುವ ಮುನ್ನ ಬರೀ ಗುಂಬಜ್ ಇತ್ತು. ನಂತರ ರಾತ್ರೋರಾತ್ರಿ ಅದರ ಮೇಲೆ ಕಳಸ ಹೇಗೆ ಬಂತು? ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ಬೆದರಿಕೆ- ಬಸ್ ಶೆಲ್ಟರ್ ಮೇಲೆ ಬಂತು ಕಳಶ..!

ಮೈಸೂರು ಅರಮನೆ ಮೇಲಿನ ಗೋಪುರಕ್ಕೂ ಮಸೀದಿ ಮೇಲಿನ ಗುಂಬಜ್ ಗೂ ವ್ಯತ್ಯಾಸ ಇಲ್ವಾ?,ಅರಮನೆ ಗೋಪುರಕ್ಕೂ ಗುಂಬಜ್ ಗೂ ಹೋಲಿಕೆ ಮಾಡುವ ಮುನ್ನ ವಾಸ್ತುಶಿಲ್ಪ ಓದಿ ಕೊಳ್ಳಿ.  ಅರಮನೆ ಗೋಪುರ ಇಂಡೋ- ಸಾರ್ಸೆನಿಕ್ ವಾಸ್ತುಶಿಲ್ಪದ್ದು.  ಬಸ್ ಸ್ಟ್ಯಾಂಡ್ ಮೇಲೆ ಇವರು ಯಾವ ವಾಸ್ತುಶಿಲ್ಪ ಸೃಷ್ಟಿಸುತ್ತಾರೆ ಹೇಳಿ?. ಬಸ್ ಸ್ಟ್ಯಾಂಡ್ ಕಟ್ಟಿದ ಗುತ್ತಿಗೆದಾರ ತನ್ನ ಮನೆ ಮೇಲೆ ಬೇಕಾದರೆ ಗುಂಬಜ್, ಮಿನಾರ್ ಕಟ್ಟಿಕೊಳ್ಳಲಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಶಾಸಕ ರಾಮದಾಸ್ ಅವರು ಅರಮನೆ ಮಾದರಿಯಲ್ಲಿ 20 ಬಸ್ ಸ್ಟ್ಯಾಂಡ್ ಕಟ್ಟಲಿ,  ನಾನು ಗುಂಬಜ್ ಬಗ್ಗೆ ಧ್ವನಿ ಎತ್ತಿದ್ದಕ್ಕೆ ರಾಮದಾಸ್ ಅವರು ಮೌನವಹಿಸಿದ್ದಾರೆ. ಅದರ ಅರ್ಥ ನನ್ನ ಮಾತಿಗೆ ಅವರ ಸಮ್ಮತಿ ಇದೆ ಅಂತಾ ಸಂಸದ ಪ್ರತಾಪ್ ಸಿಂಹ ತನ್ನ ವಿರೋಧದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

suddiyaana