ಮದುವೆಗೆ ಇನ್ನೂ ಎರಡು ದಿನ ಬಾಕಿ ಇರುವಾಗಲೇ ವರನ ಮನೆಯಲ್ಲೇ ಯುವತಿ ದುರಂತ ಸಾವು!

ಮದುವೆಗೆ ಇನ್ನೂ ಎರಡು ದಿನ ಬಾಕಿ ಇರುವಾಗಲೇ ವರನ ಮನೆಯಲ್ಲೇ ಯುವತಿ ದುರಂತ ಸಾವು!

ಅವರಿಬ್ಬರು ಕಳೆದ 7-8 ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ತಾವು ಮದುವೆಯಾಗಲು ಪೋಷಕರ ಒಪ್ಪಿಗೆಯನ್ನೂ ಪಡೆದಿದ್ದರು. ಇನ್ನೇನು 2 ದಿನಗಳಲ್ಲಿ ಈ ಜೋಡಿ ಮದುವೆಯಾಗಲು ತಯಾರಾಗಿದ್ದರು. ಆದರೆ ಹಸೆಮಣೆ ಏರಲು ಸಜ್ಜಾಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಯುವತಿಯನ್ನು ಕಳೆದ ಕುಟುಂಬಸ್ಥರು ದುಖಃದಲ್ಲಿ ಮುಳುಗಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?

ಐಶ್ವರ್ಯ ರೈ ಎಂಬ ಯುವತಿ ಹಾಗೂ ಅಶೋಕ್ ಎಂಬಾತ ಕಳೆದ 7-8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಎರಡು ಮನೆಯವರ ಒಪ್ಪಿಗೆ ಪಡೆದು ಈ ಜೋಡಿ ಹಕ್ಕಿಗಳು ಮದುವೆಯಾಗಲು ಸಜ್ಜಾಗಿದ್ದರು. ಆದರೆ ಇನ್ನೆರಡು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ.  ವರನ ಮನೆ ಬಳಿ ಇರುವ ಡ್ಯಾಂ ಬಳಿ ಯುವತಿಯ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಮೀನುಗಾರಿಕಾ ಬಂದರಿನಲ್ಲಿ ಭೀಕರ ಅಗ್ನಿ ಅವಘಡ – ಸುಟ್ಟು ಕರಕಲಾದ 40 ದೋಣಿಗಳು

ಮದುವೆಯಾಗಲು ಷರತ್ತು ವಿಧಿಸಿದ್ದ ವರನ ಕುಟುಂಬ!

ಯುವತಿ ಕೆಳಜಾತಿ ಎಂಬ ಕಾರಣಕ್ಕೆ ಆರಂಭದಲ್ಲಿ ಯುವಕ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿರಲಿಲ್ಲ. ಬಳಿಕ ಐಶ್ವರ್ಯ ಹಾಗೂ ಆಕೆಯ ಕುಟುಂಬಸ್ಥರಿಗೆ ಕೆಲವು ಷರತ್ತುಗಳ ವಿಧಿಸಿ ಯುವಕನ ಕಡೆಯವರು ಮದುವೆಗೆ ಒಪ್ಪಿಗೆ ಸೂಚಿದ್ದರು.

ಕೊಲೆ ಶಂಕೆ ವ್ಯಕ್ತಪಡಿಸಿದ ಯುವತಿ ಕುಟುಂಬ

ಐಶ್ವರ್ಯ ಹಾಗೂ ವರ ಅಶೋಕ್ ಕಳೆದ 7-8 ವರ್ಷಗಳಿಂದ ಪ್ರೀತಿಸುತ್ತಿದ್ದರು. ನಮಗೂ ಅವರಿಗೂ ಹೊಂದಾಣಿಕೆ ಆಗಲ್ಲ, ನಾನು ಈ ಮದುವೆ ಬೇಡ ಎಂದು ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ ಮನಸ್ಸಿನವಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಯುವಕನ ಮನೆಯವರೇ ಕೊಲೆ ಮಾಡಿದ್ದಾರೆ. ಕೆಳಜಾತಿ ಎಂಬ ಕಾರಣಕ್ಕೆ ಯುವತಿಯ ಕೊಲೆಗೆ ಪ್ರಚೋದನೆ ನೀಡಲಾಗಿದೆ ಎಂದು ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ.

Shwetha M