ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು 17 ಮಂದಿ ದುರ್ಮರಣ – ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು 17 ಮಂದಿ ದುರ್ಮರಣ – ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ

ನಿರ್ಮಾಣ ಹಂತದ ರೈಲ್ವೇ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಮಿಜೋರಾಂನ ಸೈರಾಂಗ್ ಪ್ರದೇಶದಲ್ಲಿ ನಡೆದಿದೆ. ಘಟನೆಯ ಪರಿಣಾಮ ಸುಮಾರು 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ರೈಲ್ವೇ ಸೇತುವೆ ಕುಸಿಯುವ ಸಂದರ್ಭದಲ್ಲಿ 35-40 ಕಾರ್ಮಿಕರು ಸ್ಥಳದಲ್ಲಿ ಇದ್ದರು. ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಇದುವರೆಗೆ ಹದಿನೇಳು ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಇನ್ನೂ ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪಡಿತರ ಚೀಟಿ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆಗೆ ಮತ್ತೆ 10 ದಿನ ಕಾಲಾವಕಾಶ!

ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಈಶಾನ್ಯ ಗಡಿ ರೈಲ್ವೆಯ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮಿಜೋರಾಂ ಸಿಎಂ ಜೋರಮ್ತಂಗ ಟ್ವೀಟ್ ಮಾಡಿದ್ದಾರೆ. ಐಜ್ವಾಲ್ ಬಳಿಯ ಸಾಯಿರಂಗ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದು ಕನಿಷ್ಠ 17 ಕಾರ್ಮಿಕರು ಮೃತಪಟ್ಟಿದ್ದಾರೆ. ರಕ್ಷಣೆ ಕಾರ್ಯ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಎಲ್ಲಾ ಮೃತರ ಕುಟುಂಬಗಳಿಗೆ ನಾನು ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಜನರಿಗೆ ಕೃತಜ್ಞತೆಗಳು ಎಂದು ಹೇಳಿದ್ದಾರೆ.

suddiyaana