ವೈಷ್ಣವಿ ಗೌಡ ಎಂಗೇಜ್ ಮೆಂಟ್ ಕಾನ್ಸಲ್: ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ವೈಷ್ಣವಿ ಹೇಳಿದ್ಯಾಕೆ ?
ವಿದ್ಯಾಭರಣ್ ವಿರುದ್ಧ ನಟಿಯೊಬ್ಬರ ಆರೋಪಗಳ ಸುರಿಮಳೆ

ವೈಷ್ಣವಿ ಗೌಡ ಎಂಗೇಜ್ ಮೆಂಟ್ ಕಾನ್ಸಲ್: ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ವೈಷ್ಣವಿ ಹೇಳಿದ್ಯಾಕೆ ?ವಿದ್ಯಾಭರಣ್ ವಿರುದ್ಧ ನಟಿಯೊಬ್ಬರ ಆರೋಪಗಳ ಸುರಿಮಳೆ

ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವೈಷ್ಣವಿ ಗೌಡ ನಿಶ್ಚಿತಾರ್ಥ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎರಡು ವಾರಗಳ ಹಿಂದೆಯಷ್ಟೇ ನಟ ವಿದ್ಯಾಭರಣ್ ಮತ್ತು ವೈಷ್ಣವಿ ಗೌಡ ಎಂಗೇಜ್ ಆಗಿದ್ದಾರೆ ಎಂದೆಲ್ಲ ಸುದ್ದಿ ಹರಿದಾಡಿತು. ಇಬ್ಬರೂ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮತ್ತು ಸಿಹಿ ತಿನ್ನಿಸುತ್ತಿರುವ ವಿಡಿಯೋ ವೈರಲ್ ಕೂಡ ಆಗಿದ್ದವು. ಹಾಗಾಗಿ ಇಬ್ಬರೂ ಒ‍ಪ್ಪಿಕೊಂಡೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ಈ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ನಟಿ ವೈಷ್ಣವಿ ಗೌಡ ಸ್ಪಷ್ಟನೆ ನೀಡಿದ್ದಾರೆ.  ‘ವಿದ್ಯಾಭರಣ್ ಜೊತೆ ನಿಶ್ಚಿತಾರ್ಥ ನಡೆದಿಲ್ಲ ಅಂತ ನಾನು ಮುಂಚಿನಿಂದಲೂ ಹೇಳುತ್ತಾ ಬಂದಿದ್ದೇನೆ. ಇದನ್ನು ಇಲ್ಲಿಗೇ ಬಿಟ್ಟುಬಿಡಿ. ನಾನು ಈ ಕುರಿತು ಮತ್ತೆ ಮಾತನಾಡಿದರೆ ಅದು ಬೆಳೆಯುತ್ತಲೇ ಹೋಗುತ್ತದೆ. ಹುಡುಗನ ಕಡೆಯಿಂದ ಇನ್ನೇನೋ ಮಾತು ಬರಬಹುದು. ಅವರು ಹೆಣ್ಣು ನೋಡೋ ಶಾಸ್ತ್ರಕ್ಕೆಂದು ಬಂದು ತಾಂಬೂಲ ಬದಲಾಯಿಸಿಕೊಂಡಿದ್ದಾರೆ ಅಷ್ಟೇ. ಅದು ನಿಶ್ಚಿತಾರ್ಥ ಅಲ್ಲ’ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಹಸೆಮಣೆ ಏರಲು ಸಜ್ಜಾದ ಅಗ್ನಿಸಾಕ್ಷಿ ಸನ್ನಿಧಿ – ವೈಷ್ಣವಿಗೌಡ ಎಂಗೇಜ್‌ಮೆಂಟ್ ಫೋಟೋ ವೈರಲ್

“ನಾವು ಇದನ್ನು ಇಲ್ಲಿಗೆ ಕೈಬಿಡುತ್ತಿದ್ದೇವೆ. ಈ ವಿಷಯವನ್ನು ಮತ್ತೆ ಎಳೆಯಬೇಡಿ, ಇಲ್ಲಿಗೆ ಬಿಡಿ ಎಂದು ಎಲ್ಲರ ಬಳಿ ಮನವಿ ಮಾಡುತ್ತಿದ್ದೇನೆ. ಎಲ್ಲರ ಶುಭಹಾರೈಕೆಗೆ ಧನ್ಯವಾದಗಳು” ಎಂದು ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಹಾಕಿದ್ದಾರೆ. ಅಲ್ಲದೇ ವಿದ್ಯಾಭರಣ್ ಮೇಲೆ ಆರೋಪ ಕೇಳಿ ಬಂದ ಬೆನ್ನಲ್ಲೇ ಈ ಮದುವೆ ಮಾತುಕತೆಯನ್ನು ಇಲ್ಲಿಗೆ ಮುರಿಯಲಾಗಿದೆ ಎಂದು ವೈಷ್ಣವಿ  ಸ್ಪಷ್ಟನೆ ಕೊಟ್ಟಿದ್ದಾರೆ.

ವಿದ್ಯಾಭರಣ್ ಮೇಲೆ ಆರೋಪಗಳ ಸುರಿಮಳೆ

ನಟಿ ವೈಷ್ಣವಿ ಗೌಡ ಜೊತೆ ನಿಶ್ಚಿತಾರ್ಥ ಆಗಿರೋ ಫೋಟೋ ವೈರಲ್ ಆದ ಬೆನ್ನಲ್ಲೇ ನಟಿಯೊಬ್ಬರ ಆಡಿಯೋ ಸದ್ದು ಮಾಡುತ್ತಿದ್ದು, ವಿದ್ಯಾಭರಣ್ ಮೇಲೆ ಅನೇಕ ಆರೋಪಗಳನ್ನ ಮಾಡಿದ್ದಾರೆ. ಇನ್ ಸ್ಟಾಗ್ರಾಂ ಖಾತೆಯಿಂದ ಅನೇಕ ಹುಡುಗಿಯರೊಂದಿಗೆ ಮೆಸೇಜ್ ಮಾಡಿ ಅನುಚಿತ ವರ್ತನೆ ತೋರಿದ್ದಾನೆ. ಏನೇ ಆಗಲಿ ವೈಷ್ಣವಿಗೆ ಮೋಸ ಆಗಬಾರದು ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ಆಡಿಯೋ ಇದೀಗ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಆಡಿಯೋದಲ್ಲಿ ಏನಿದೆ?

ವ್ಯಕ್ತಿಯೊಬ್ಬರಿಗೆ ಕರೆ ಮಾಡಿರುವ ನಟಿ, ಅವನು ಒಂದೇ ಒಂದು ಡಬ್ಬಾ ಸಿನಿಮಾದಲ್ಲಿ ನಟಿಸಿದ್ದಾನೆ. ಅದು ಒಂದು ವಾರ ಸಹ ಹೆಸರು ಮಾಡಲಿಲ್ಲ. ಅವನ ನಿಜವಾದ ಹೆಸರು ವಿದ್ಯಾಭರಣ್ ಅಂತಾ ಹಳ್ಳಿಯಿಂದ ಬಂದು ಇಲ್ಲೇ ಮನೆ ಕಟ್ಟಿಕೊಂಡಿದ್ದಾನೆ. ಒಂದು ಸಾಯಿಬಾಬಾ ಟೆಂಪಲ್ ಇದೆ. ತನ್ನ ಇನ್ ಸ್ಟಾಗ್ರಾಮ್ ಖಾತೆಯಿಂದ ಅನೇಕ ಹುಡುಗಿಯರಿಗೆ ಮೆಸೇಜ್ ಮಾಡಿದ್ದಾನೆ. ಈಗ 3-4 ಸಾವಿರ ಫಾಲೋವರ್ಸ್ ಇದ್ದ ಆ ಖಾತೆಯೇ ಇಲ್ಲ. ಹುಡುಗಿಯರಿಗೆ ಮೆಸೇಜ್ ಮಾಡುತ್ತಾ ನಾನು ನಿಮ್ಮನ್ನ ಮದುವೆ ಆಗುತ್ತೇನೆ, ಡೇಟ್ ಮಾಡೋಣ? ಅಂತಾ ಕರೆದಿದ್ದಾನೆ.

ಅಲ್ಲದೇ ಫ್ಯಾಶನ್ ಡಿಸೈನರ್ ಒಬ್ಬರನ್ನ ಮನೆಗೆ ಕರೆದುಕೊಂಡು ಹೋಗಿ ನನ್ನ ಹೆಂಡತಿ ಆಗುವವಳು ಅಂತಾ ಪರಿಚಯ ಮಾಡಿಸಿದ್ದಾನೆ. ನಂತರ ಬ್ರೇಕಪ್ ಮಾಡಿಕೊಂಡಿದ್ದಾನೆ. ಹಾಗೆಯೇ ನನಗೂ ಮೆಸೇಜ್ ಮಾಡಿ, ತುಂಬ ಇಷ್ಟ ಆಗಿದ್ದೀರಾ, 150 ಕೋಟಿ ಆಸ್ತಿಯಿದೆ, ಆಡಿ ಕಾರ್‌ ಇದೆ. ಟೆಂಪಲ್ ಇದೆ ಎಂದು ಹೇಳಿಕೊಂಡಿದ್ದ. ಡೇಟ್ ಮಾಡಲು ಕರೆದಿದ್ದ. ನಾನು ಆಗಲ್ಲ ಎಂದು ಹೇಳಿದೆ. ಇದಲ್ಲದೇ ರಾಜಕಾರಣಿಗಳ ಹೆಸರು ಬಳಸಿಕೊಂಡು ಹೆದರಿಸುವ ಕೆಲಸವನ್ನು ಆತ ಮಾಡಿದ್ದಾನೆ ಅನ್ನೋ ಅನೇಕ ಆರೋಪಗಳನ್ನ ಮಾಡಿದ್ದಾರೆ.

ಆಡಿಯೋ ಕುರಿತು ವಿದ್ಯಾಭರಣ್ ಸ್ಪಷ್ಟನೆ

ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ವಿದ್ಯಾಭರಣ್ ಸ್ಪಷ್ಟನೆ ನೀಡಿದ್ದಾರೆ. ‘ಈ ಹಿಂದೆ ನನಗೆ ಗರ್ಲ್​​ಫ್ರೆಂಡ್ ಇದ್ದಿದ್ದು ನಿಜ. ಇದ್ದು ಗೊತ್ತಿರುವ ವಿಚಾರ. ನಾನು ಯಾವುದೇ ಹುಡುಗಿಯೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಡಿಯೋದಲ್ಲಿ ನನ್ನ ಬಗ್ಗೆ ಯುವತಿಯೊಬ್ಬರು ಮಾತನಾಡಿದ್ದಾರೆ. ಆಕೆ ನೇರವಾಗಿಯೇ ಬಂದು ಆರೋಪ ಮಾಡಬಹುದಿತ್ತು. ಆರೋಪ ಮಾಡುವ ಬದಲು ನನ್ನ ವಿರುದ್ಧ ದೂರು ಕೊಡಬಹುದಿತ್ತು. ನಮ್ಮ ಕುಟುಂಬದ ವರ್ಚಸ್ಸು ಹಾಳು ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಇಂದು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇನೆ’ ಎಂದು ಹೇಳಿದ್ದಾರೆ.

suddiyaana