ಹುಲಿ ಉಗುರು ಪ್ರಕರಣ – ವರ್ತೂರು ಸಂತೋಷ್‌ ಬಿಗ್‌ಬಾಸ್‌ ಮನೆಗೆ ರೀ ಎಂಟ್ರಿ!

ಹುಲಿ ಉಗುರು ಪ್ರಕರಣ – ವರ್ತೂರು ಸಂತೋಷ್‌ ಬಿಗ್‌ಬಾಸ್‌ ಮನೆಗೆ ರೀ ಎಂಟ್ರಿ!

ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿದ್ದರು. ಇದೀಗ ಜಾಮೀನು ಮೂಲಕ ಜೈಲಿನಿಂದ ಹೊರಬಂದಿದ್ದಾರೆ. ಜಾಮೀನು ಮೂಲಕ ಹೊರ ಬಂದಿರುವ ವರ್ತೂರು ಮತ್ತೆ ಬಿಗ್‌ಬಾಸ್‌ ಮನೆಗೆ ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅವರು ದೊಡ್ಮನೆಗೆ  ಎಂಟ್ರಿ ಕೊಡಲಿದ್ದಾರೆ ಎನ್ನುತ್ತಿವೆ ಮೂಲಗಳು. ಈ ಮೂಲಕ ವೀಕೆಂಡ್ ಎಪಿಸೋಡ್​ಗೆ ಅವರು ಲಭ್ಯವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ವರ್ತೂರು ಸಂತೋಷ್‌ ಅವರು ಹುಲಿ ಉಗುರಿನ ಪೆಂಡೆಂಟ್‌ ಧರಿಸಿ ಬಿಗ್‌ಬಾಸ್‌ ಮನೆಗೆ ಆಗಿಮಿಸಿದ್ದರು. ಅವರ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಈ ಹಿನ್ನೆಲೆ ಅವರ ವಿರುದ್ಧ ಕೇಸ್‌ ದಾಖಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ವರ್ತೂರು ಸಂತೋಷ್‌ ಅವರನ್ನು ಬಂಧಿಸಿದ್ದರು. ಇದೀಗ ಜಾಮೀನು ಮೂಲಕ ಸಂತೋಷ್‌ ಹೊರಬಂದಿದ್ದಾರೆ.

ಇದನ್ನೂ ಓದಿ: ಹುಲಿ ಉಗುರು ಬಿಗಿ ಉರುಳು – ವನ್ಯಜೀವಿ ವಸ್ತುಗಳನ್ನು ಇಲಾಖೆಗೆ ಮರಳಿಸಲು ಕಾಲಾವಕಾಶ ನೀಡಿದ ಸರ್ಕಾರ?

ಇನ್ನು ಸಂತೋಷ್‌ ಅವರಿಗೆ ಕೋರ್ಟ್ ಜಾಮೀನು ನೀಡುವಾಗ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಅವರು ಬಿಗ್ ಬಾಸ್​ಗೆ ಮರಳಲು ಅವಕಾಶ ಇತ್ತು. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್​ಗೆ ರೀ ಎಂಟ್ರಿ ಪಡೆಯಲಿದ್ದಾರೆ. ಈಗಾಗಲೇ ಅವರ ಹೆಸರು, ಫೋಟೋ ವಾಹಿನಿಗಳಲ್ಲಿ ಬಂದು ಸಾಕಷ್ಟು ಸುದ್ದಿ ಆಗಿದ್ದಾರೆ. ಒಂದೊಮ್ಮೆ ಬಿಗ್ ಬಾಸ್​ ಮನೆಗೆ ರೀ ಎಂಟ್ರಿ ಕೊಟ್ಟರೆ ವೀಕ್ಷಕರ ವರ್ಗ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೆಲವು ಮೂಲಗಳ ಪ್ರಕಾರ ವೈಲ್ಡ್ ಕಾರ್ಡ್ ಮೂಲಕ ಸಂತೋಷ್​ ಅವರಿಗೆ ಎಂಟ್ರಿ ಕೊಡುವ ಸಾಧ್ಯತೆ ಇದೆಯಂತೆ. ಈಗ ಸಂತೋಷ್ ಅವರು ದೊಡ್ಮನೆಗೆ ಎಂಟ್ರಿ ಕೊಟ್ಟರೆ ಲೆಕ್ಕಾಚಾರ ಬದಲಾಗಲಿದೆ. ಕಳೆದ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಎಲಿಮಿನೇಟ್ ಆದರು. ಆ ಬಳಿಕ ಅವರಿಗೆ ವೈಲ್ಡ್ ಕಾರ್ಡ್ ಮೂಲಕ ಮತ್ತೆ ಬಿಗ್ ಬಾಸ್​ಗೆ ಬರೋಕೆ ಅವಕಾಶ ನೀಡಲಾಯಿತು. ಸಂತೋಷ್ ವಿಚಾರದಲ್ಲೂ ಹಾಗೆಯೇ ಮಾಡಲಾಗುತ್ತಿದೆ ಎನ್ನಲಾಗಿದೆ.

Shwetha M