ಆಸ್ಕರ್ ರೇಸ್‌ ಗೆ ಕನ್ನಡದ ಕಾಂತಾರ- ವಿಜಯ್ ಕಿರಗಂದೂರು ಸ್ಪಷ್ಟನೆ

ಆಸ್ಕರ್ ರೇಸ್‌ ಗೆ ಕನ್ನಡದ ಕಾಂತಾರ- ವಿಜಯ್ ಕಿರಗಂದೂರು ಸ್ಪಷ್ಟನೆ

ಕನ್ನಡದ ಸೂಪರ್ ಹಿಟ್ ಚಿತ್ರ ಕಾಂತಾರ ಈಗ ಆಸ್ಕರ್ ರೇಸ್‌ ಗೆ ಇಳಿಯಲು ಅರ್ಜಿ ಸಲ್ಲಿಸಿದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ನಿರ್ದೇಶಿಸಿ ನಟಿಸಿದ ಕಾಂತಾರಾ ಚಿತ್ರ ಜಗತ್ತಿನಾದ್ಯಂತ ಅತ್ಯುತ್ತಮ ಪ್ರದರ್ಶನ ಕಂಡಿತ್ತು. ಎಲ್ಲಾ ಭಾಷಗಳಲ್ಲೂ ಉತ್ತಮ ರೆಸ್ಪಾನ್ಸ್ ಬಂದಿದ್ದಲ್ಲದೇ ಹಲವು ದಾಖಲೆಗಳನ್ನ ಬರೆದ ಹೆಗ್ಗಳಿಕೆ ಕಾಂತಾರ ಚಿತ್ರದ್ದು. ಕಾಂತಾರದ ಯಶಸ್ಸಿನಿಂದ ಹುಮ್ಮಸ್ಸಿನಲ್ಲಿರುವ ಚಿತ್ರತಂಡ ಆಸ್ಕರ್ ರೇಸ್‌ಗೆ ಇಳಿಯಲು ಪ್ರಯತ್ನ ಮಾಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರು ಮಾಹಿತಿ ನೀಡಿದ್ದಾರೆ. ಕನ್ನಡದ ಸಿನಿಮಾವೊಂದು ಆಸ್ಕರ್ ರೇಸ್‌ಗೆ ಇಳಿಯುತ್ತಿರುವುದು ಇದೇ ಮೊದಲು ಅನ್ನೋದು ವಿಶೇಷ.

ಇದನ್ನೂ ಓದಿ :  ಬಿಗ್‌ಬಾಸ್‌ ಮನೆಯಿಂದ ಹೊರನಡೆದ ಅರುಣ್ ಸಾಗರ್ – ಆಸ್ಪತ್ರೆಯಲ್ಲಿ ಮಗಳನ್ನು ನೋಡಿ ಭಾವುಕ

ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಕಡೆಯಿಂದ ‘ಆರ್ ಆರ್ ಆರ್’ ಸಿನಿಮಾ ಆಸ್ಕರ್ ಸ್ಪರ್ಧೆಗೆ ಅರ್ಹತೆ ಪಡೆದಿರಲಿಲ್ಲ. ಈ ಕಾರಣಕ್ಕೆ For Your Consideration ಮೂಲಕ ‘ಆರ್ ಆರ್ ಆರ್’ ಸಿನಿಮಾ ಆಸ್ಕರ್ ರೇಸ್‌ಗೆ ಎಂಟ್ರಿ ಪಡೆಯಲು ಪ್ರಯತ್ನಿಸಿತ್ತು. ಈಗ ‘ಕಾಂತಾರ’ ಸಿನಿಮಾ ಕೂಡ ಇದೇ ರೀತಿಯ ಪ್ರಯತ್ನ ಮಾಡಿದೆ. ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ವಿಜಯ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಆಸ್ಕರ್ ರೇಸ್‌ನಲ್ಲಿ ಸ್ಪರ್ಧೆ ಮಾಡಲು ನಾವು ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಅಂತಿಮ ನಾಮನಿರ್ದೇಶನ ಪಟ್ಟಿ ಇನ್ನಷ್ಟೇ ಬರಬೇಕಿದೆ’ ಎಂದು ಹೇಳಿದ್ದಾರೆ. ಕಾಂತಾರ ಸಿನಿಮಾ ಬಾಕ್ಸ್ ಆಫೀಸ್‌ಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ.

suddiyaana