ದಳಪತಿ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಅತಿರೇಕದ ವರ್ತನೆ  – ಕೇರಳದಲ್ಲಿ ವಿಜಯ್ ಕಾರಿನ ಮೇಲೆ ದಾಳಿ!

ದಳಪತಿ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಅತಿರೇಕದ ವರ್ತನೆ  – ಕೇರಳದಲ್ಲಿ ವಿಜಯ್ ಕಾರಿನ ಮೇಲೆ ದಾಳಿ!

ನಟ ದಳಪತಿ ವಿಜಯ್ ಅವರಿಗೆ ತಮಿಳುನಾಡು ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ. ಕರ್ನಾಟಕ, ಕೇರಳ ಸೇರಿದಂತೆ ದೇಶದಾದ್ಯಂತ ಕೋಟ್ಯಂತರ ಮಂದಿ ಅಭಿಮಾನಿಗಳಿದ್ದಾರೆ. ಅವರ ನಟನೆಗೆ ಸಿನಿ ಪೇಕ್ಷಕರು ಫಿದಾ ಆಗಿದ್ದಾರೆ. ದಳಪತಿ ಸುಮಾರು 14 ವರ್ಷಗಳ ಬಳಿಕ ಶೂಟಿಂಗ್​ಗಾಗಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ದಳಪತಿ ಕಾರಿನ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ.

ಮಂಗಳವಾರ ಕೇರಳದ ತಿರುವನಂತಪುರಂಗೆ ವಿಜಯ್ ಅವರು ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ವಿಮಾನ ನಿಲ್ದಾಣದಲ್ಲಿ ಅವರು ಆಗಮಿಸುವುದಕ್ಕೂ ಮೊದಲೇ ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ವಿಮಾನ ನಿಲ್ದಾಣದಿಂದ ಅವರು ತಂಗುವ ಹೋಟೆಲ್ ವರೆಗೂ ಫಾಲೋ ಮಾಡಿಕೊಂಡು ಹೋಗಿದ್ದಾರೆ. ಈ ವೇಳೆ ನೂಕು ನುಗ್ಗಲು ಆಗಿದೆ. ಮಾತ್ರವಲ್ಲ, ಅಭಿಮಾನಿಗಳಿಂದ ವಿಜಯ್ ಕಾರಿನ ಮೇಲೆ ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಅಧಿಕೃತ ಚಾಲನೆ – ಮೊದಲ ಹಂತದ ಚುನಾವಣೆಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭ

ದಾಳಿಯ ಪರಿಣಾಮ ವಿಜಯ್‌  ಕಾರಿನ ಗಾಜು ಜಖಂಗೊಂಡಿದೆ. ಬರೋಬ್ಬರಿ 14 ವರ್ಷಗಳ ಬಳಿಕ ವಿಜಯ್​​ ಕೇರಳಕ್ಕೆ ಹೋಗಿದ್ದರು ಎನ್ನಲಾಗಿದೆ. ಅದೇ ಕಾರಣಕ್ಕೆ ಅವರನ್ನು ಆತ್ಮೀಯವಾಗಿ ಸ್ವಾಗತಿಸುವ ಬರದಲ್ಲಿ ಅಭಿಮಾನಿಗಳು ಅನಾಹುತ ಮಾಡಿದ್ದಾರೆ. ಪರಿಣಾಮ ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಲಾಠಿಚಾರ್ಜ್ ಕೂಡ ಮಾಡಿದ್ದಾರೆ. ಇದರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ.

ವರದಿಗಳ ಪ್ರಕಾರ ವಿಜಯ್ ತಮ್ಮ ಮುಂದಿನ ಸಿನಿಮ GOAT ಸಿನಿಮಾದ ಶೂಟಿಂಗ್​ಗಾಗಿ ತೆರಳಿದ್ದರು. ಸದ್ಯ ಅಭಿಮಾನಿಗಳ ದಾಂಧಲೆಯಿಂದಾಗಿ ಚಿತ್ರೀಕರಣವನ್ನು ಸ್ಥಗಿತಗೊಳಿಸಿದ್ದಾರೆ ಎಂದು ವರದಿಯಾಗಿದೆ. GOAT ಚಿತ್ರತಂಡವು ಒಂದು ವಾರಗಳ ಕಾಲ ಕೇರಳದಲ್ಲಿ ಶೂಟಿಂಗ್ ಮಾಡಲು ನಿರ್ಧರಿಸಿತ್ತು. ವೆಂಕಟ್ ಪ್ರಭು ನಿರ್ದೇಶನದ ಈ ಚಿತ್ರವು ಮುಂದಿನ ವರ್ಷ ತೆರೆಗೆ ಬರಲು ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.

Shwetha M