ಶಾಂತವಾಗುತ್ತಿದ್ದ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ – ಬಂಡುಕೋರರ ದಾಳಿಗೆ ಬಿಎಸ್ ಎಫ್ ಯೋಧ ಹುತಾತ್ಮ!

ಶಾಂತವಾಗುತ್ತಿದ್ದ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ – ಬಂಡುಕೋರರ ದಾಳಿಗೆ ಬಿಎಸ್ ಎಫ್ ಯೋಧ ಹುತಾತ್ಮ!

ಮಣಿಪುರ ಇನ್ನೇನು ಶಾಂತವಾಗುತ್ತಿದೆ ಎನ್ನುವಾಗಲೇ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಜನಾಂಗೀಯ ಗಲಾಟೆಯಲ್ಲಿ ಬಂಡುಕೋರರ ಗುಂಡಿನ ದಾಳಿಗೆ ಒಬ್ಬ ಬಿಎಸ್‌ಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡಿದ್ದಾರೆ. ಜೂನ್ 5ರ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವೆ ಗುಂಡಿನ ಕಾಳಗ ನಡೆದಿದೆ. ದಾಳಿಯಲ್ಲಿ ಮಣಿಪುರದ ಸೆರೌನಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡು ಗಡಿ ಭದ್ರತಾ ಪಡೆಯ ಒಬ್ಬ ಯೋಧ ಸಾವನ್ನಪ್ಪಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡಿರುವ ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ಮಂತ್ರಿಪುಖ್ರಿಗೆ ವಿಮಾನದ ಮೂಲಕ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ : ಶವಗಳ ನಡುವೆ ಮಿಡಿಯುತ್ತಿತ್ತು ಹೃದಯ.. ತಂದೆಯ ನಂಬಿಕೆ ಹುಸಿಯಾಗಲಿಲ್ಲ – ಪುತ್ರನನ್ನ ಕಾಪಾಡಿದ ಅಪ್ಪ  

ಮಣಿಪುರದ ಸುಗ್ನು/ಸೆರೌ ಪ್ರದೇಶಗಳಲ್ಲಿ ಅಸ್ಸಾಂ ರೈಫಲ್ಸ್, ಬಿಎಸ್‌ಎಫ್ ಮತ್ತು ಪೋಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಸಮಯದಲ್ಲಿ ಭದ್ರತಾ ಪಡೆಗಳು ಮತ್ತು ಬಂಡುಕೋರರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಕೂಡ ಪ್ರತಿದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದಲ್ಲಿ ಇತ್ತೀಚಿನ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆಯು ಅಸ್ಸಾಂ ರೈಫಲ್ಸ್, CAPF (ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು) ಮತ್ತು ಪೊಲೀಸರೊಂದಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಸೇನೆ, ಅಸ್ಸಾಂ ರೈಫಲ್ಸ್, ಪೊಲೀಸ್ ಮತ್ತು ಸಿಎಪಿಎಫ್‌ಗಳು ಶನಿವಾರ ಮಣಿಪುರದಾದ್ಯಂತ ಬೆಟ್ಟಗಳು ಮತ್ತು ಕಣಿವೆ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

suddiyaana