ನಾವೆಲ್ಲ ಹಿಂದೂಗಳು.. ಹಿಂದೂ ಧರ್ಮದ ವಿರುದ್ಧ ಮಾತಾಡಿಲ್ಲ..- ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್‌

ನಾವೆಲ್ಲ ಹಿಂದೂಗಳು.. ಹಿಂದೂ ಧರ್ಮದ ವಿರುದ್ಧ ಮಾತಾಡಿಲ್ಲ..- ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳಕಾರಿಯಾಗಿ ಹೇಳಿದ್ದ ಸಚಿವ ಪರಮೇಶ್ವರ್‌ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ನಾನು ಮಾತಾಡಿಲ್ಲ. ಅದನ್ನ ಬೇರೆ ರೀತಿ ಅರ್ಥೈಸುವ ಕೆಲಸವನ್ನು ನಾನು ಯಾವತ್ತೂ ಮಾಡಿಲ್ಲ. ನಾವೆಲ್ಲ ಹಿಂದೂಗಳು ಎಂದು ಹೇಳಿದ್ದಾರೆ.

ಮಂಗಳವಾರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದರು. ಈ ಹೇಳಿಕೆ ರಾಜ್ಯದಲ್ಲಿ ಭಾರಿ ವಿವಾದ ಎಬ್ಬಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ಎದ್ದರೆ ಗಣಪತಿಯನ್ನ ನೆನಪು ಮಾಡಿಕೊಳ್ತೀವಿ. ನಾನು ಬೆಳೆಗ್ಗೆ ಎದ್ದ ಕೂಡಲೇ ಲಕ್ಷ್ಮಿ ಶ್ಲೋಕ ಹೇಳುತ್ತೇನೆ. ಮಲಗೋವಾಗ ಹನುಮನ ಶ್ಲೋಕ ಹೇಳ್ತೀನಿ ಎಂದು ಎರಡೂ ಶ್ಲೋಕ ಹೇಳಿದರು. ಬಳಿಕ ಬಿಜೆಪಿಯವರಿಗೆ ಈ ಶ್ಲೋಕಗಳು ಬರುವುದಿಲ್ಲ. ಅವರಿಗೆ ಕೇಳಿ ನೋಡಿ ಇದನ್ನ ಹೇಳ್ತಾರಾ ಎಂದು ಬಿಜೆಪಿ ನಾಯಕರಿಗೆ ಪರಮೇಶ್ವರ್ ಸವಾಲೆಸೆದರು.

ಇದನ್ನೂ ಓದಿ: ಹಿಂದೂ ಧರ್ಮ ಹುಟ್ಟಿದ್ದು ಯಾವಾಗ.. ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ! – ವಿವಾದಾತ್ಮಕ ಹೇಳಿಕೆ ನೀಡಿದ ಗೃಹ ಸಚಿವ ಪರಮೇಶ್ವರ್‌

ನಾನು ಹೇಳಿದ್ದು ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಈ ದೇಶದಲ್ಲಿ ಹುಟ್ಟಿದ ಧರ್ಮದ ಬಗ್ಗೆ ಸ್ಟಡಿ ಮಾಡಿದ್ರು. ಅದನ್ನ ನಾನು ಹೇಳಿದ್ದು. ಅವರು ಹೇಳಿದ್ದನ್ನ ನಾನು ಹೇಳಿದ್ದು. ಅವರ ಪ್ರಕಾರ ಜೈನ, ಮುಸ್ಲಿಂ ಧರ್ಮ ಸ್ಥಾಪನೆ ಮಾಡಿದವರು ಇದ್ದರು. ಆದರೆ ಹಿಂದೂ ಧರ್ಮಕ್ಕೆ ಇಲ್ಲ ಅಂತ ಹೇಳಿದ್ದರು. ಅಷ್ಟು ಹೇಳಿದ್ದಕ್ಕೆ ಬಿಜೆಪಿ ಅವರು ಬೊಬ್ಬೆ ಹೊಡೆಯುತ್ತಿದ್ದಾರೆ. ನಾನೇನು ಅವಹೇಳನಕಾರಿಯಾಗಿ ಮಾತಾಡಿಲ್ಲ. ಹಿಂದೂ ಧರ್ಮದ ಮೇಲೆ ನಮಗೆ ಇರೋ ಗೌರವ ಅವರಿಗೆ ಇದೆಯಾ ಎಂದು ಪ್ರಶ್ನಿಸಿದರು.

ನಾನು ಹೇಳಿದ್ದು ಕೃಷ್ಣ ಹುಟ್ಟಿದ ದಿನ ಧರ್ಮ ಅಧರ್ಮ ಆದಾಗ, ನೀತಿ, ಅನೀತಿ ಆದಾಗ ಕೃಷ್ಣ ಮತ್ತೆ ಹುಟ್ಟಿ ಬರುತ್ತೇನೆ ಅಂತ ಹೇಳುತ್ತಾನೆ. ಇದನ್ನೇ ನಾನು ಹೇಳಿದ್ದು ಯಧಾ ಯಧಾಹೀ ಧರ್ಮಸ್ಯ ಅಂತ. ಹಿಂದೂ ಧರ್ಮ ಯಾವಾಗ ಹುಟ್ಟಿತು ಅಂತ ನಾನು ಪ್ರಶ್ನೆ ಮಾಡಿಲ್ಲ. ಪದೇ ಪದೇ ನಾನು ಅದನ್ನೇ ಹೇಳಲು ಉದ್ಯೋಗ ಅಲ್ಲ ಎಂದರು.

ಬಿಜೆಪಿಯವರು ಇದನ್ನ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಅದೇ ಕೆಲಸ. ಅವರು ಅದನ್ನೆ ಮಾಡಬೇಕು. ಅಭಿವೃದ್ಧಿ ಬಗ್ಗೆ ಮಾತಾಡೋದಿಲ್ಲ. ಕೇಂದ್ರ ಸರ್ಕಾರ ಇನ್ನು ನಮಗೆ ಒಂದು ರೂಪಾಯಿ ಹಣ ಬಿಡುಗಡೆ ಮಾಡಿಲ್ಲ. ಈ ವರ್ಷದಲ್ಲಿ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಅದರ ಬಗ್ಗೆ ಬಿಜೆಪಿ ಅವರು ಮಾತಾಡಲಿ. ಅಭಿವೃದ್ಧಿ ಬಗ್ಗೆ ಮಾತಾಡಲಿ ಸಲಹೆ ಕೊಡಲಿ. ಅದು ಬಿಟ್ಟು ಯಾವುದರ ಬಗ್ಗೆಯೋ ಮಾತಾಡ್ತಾರೆ ಎಂದು ಬಿಜೆಪಿ ವಿರುದ್ಧ ಪರಮೇಶ್ವರ್ ಕಿಡಿಕಾರಿದರು.

suddiyaana