ರಾಜ್ಯದ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ – ಸರ್ಕಾರದಿಂದ ಸಿಕ್ತು ಗ್ರೀನ್‌ ಸಿಗ್ನಲ್‌!   

ರಾಜ್ಯದ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ – ಸರ್ಕಾರದಿಂದ ಸಿಕ್ತು ಗ್ರೀನ್‌ ಸಿಗ್ನಲ್‌!   

ಬೆಂಗಳೂರು: ಶಾಲೆಗಳಲ್ಲಿ ವಾರಕ್ಕೆ ಎರಡು ಮೊಟ್ಟೆಗಳನ್ನು ನೀಡಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ  ಮೊಟ್ಟೆ ನೀಡಲು ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ  ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಸರ್ಕಾರ ವಾರದಲ್ಲಿ ಒಂದೇ ಮೊಟ್ಟೆ ಕೊಡ್ತಿತ್ತು. ವಾರಕ್ಕೆ 2 ಮೊಟ್ಟೆ   ಕೊಡುವ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿಕೊಂಡಿದ್ದೆ. ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮೋದಿಸಿದ್ದಾರೆ. ಎಸ್​ಡಿಎಮ್​ಸಿ ಅವರಿಗೆ ಎಲ್ಲಾ ಅಧಿಕಾರ ಕೊಟ್ಟಿದ್ದೇವೆ. ಶೂ ವಿಚಾರ ಕೂಡ ಅವರಿಗೆ ಅಧಿಕಾರ ಕೊಟ್ಟಿದ್ದೇವೆ. 280 ಕೋಟಿ ಈ ಮೊಟ್ಟೆ ಕೊಡಲು ಸದ್ಯ ಯೋಜನೆ ಮಾಡಿಕೊಂಡಿದ್ದೇವೆ. ವಾರ್ಷಿಕವಾಗಿ 84 ದಿನ ಮಕ್ಕಳಿಗೆ ಕೊಡಲಾಗುತ್ತದೆ. ಮೊಟ್ಟೆ ತಿನ್ನದೇ ಇರುವವರು ಚಿಕ್ಕಿ ಬಾಳೆ ಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ. ಕ್ವಾಲಿಟಿ ಚೆನ್ನಾಗಿಲ್ಲ ಅಂದರೆ ಎಸ್​ಡಿಎಮ್​ಸಿ ಅವರೇ ಜವಾಬ್ದಾರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಮುಂದಾದ ಬಿಬಿಎಂಪಿ‌ – ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಅಧಿಕಾರಿ ನೇಮಕ

ಮೊಟ್ಟೆ, ಚಿಕ್ಕಿ ಬಾಳೆ ಹಣ್ಣು ಕೊಡುವುದರಿಂದ ಮಾರ್ಜಿನಲ್ ಹೆಲ್ಪ್ ಆಗಿದೆ ಅಷ್ಟೇ. ಶಿಕ್ಷಣ ವ್ಯವಸ್ಥೆಯಲ್ಲಿ ಇರುವ ಸಮಸ್ಯೆ ಮಾನ್ಯ ಮುಖ್ಯಮಂತ್ರಿಗಳಿಗೆ ಗೊತ್ತು. ಹೀಗಾಗಿ ನಾನು ಅವರ ಬಳಿ ಮನವಿ ಮಾಡಿದ್ದೆ ಎಂದು ಹೇಳಿದ್ದಾರೆ.

ಪಠ್ಯ ಪುಸ್ತಕದಲ್ಲಿ ಧಾರ್ಮಿಕತೆ ಹಾಗೂ ರಾಜಕೀಯ ಇರಬಾರದು. ಪಠ್ಯದಲ್ಲಿನ ಐಡಿಯಾಲಜಿ ಎಲ್ಲವನ್ನೂ ನಾವು ತೆಗೆದು ಹಾಕಿದ್ದೇವೆ. ಮುಂದಿನ ವರ್ಷವೂ ನಾವು ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಪಠ್ಯದಲ್ಲಿ ಅನೇಕ ಬದಲಾವಣೆ ಮಾಡುತ್ತೇವೆ. ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಚರ್ಚೆ ಮಾಡಲಾಗುವುದು. ಕೇಸ್ ಕೋರ್ಟ್​ನಲ್ಲಿದೆ, ಇನ್ನೂ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಬೇಕಿದೆ. ಪಠ್ಯ ಪುಸ್ತಕ ಪರಿಷ್ಕರಣೆ ತುಂಬಾ ಮಾಡಬೇಕಿದೆ. ಸದ್ಯ ನಾವು ಕೆಲವು ಮಾತ್ರ ಪರಿಷ್ಕರಣೆ ಮಾಡಬೇಕಿದೆ. ಮುಂದಿನ ವರ್ಷದಿಂದ ಪಿಯು ಪರೀಕ್ಷಾ ಮಾದರಿಯಲ್ಲಿಯೂ ಬದಲಾವಣೆ ಮಾಡುತ್ತೇವೆ. 20 ಆಂತರಿಕ ಅಂಕ ನೀಡಲು ಆದೇಶ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.

ನಾನು ಅಧಿಕಾರಕ್ಕೆ ಬಂದಾಗ ನನ್ನ ಕ್ಷೇತ್ರದಲ್ಲಿ 52 ಶಾಲೆಯಲ್ಲಿ ಶಿಕ್ಷಕರೇ ಇರಲಿಲ್ಲ. ಎಷ್ಟೋ ಪೋಷಕರು ಖಾಸಗಿ ಶಾಲೆಗೆ ಮಕ್ಕಳನ್ನ ಸೇರಿಸುತ್ತಾರೆ. ನಾವು ಮುಂದಿನ ಎಂಟು ತಿಂಗಳ ಒಳಗೆ ಕೆಲವೊಂದಿಷ್ಟು ಪ್ಲಾನ್ ಮಾಡಿಕೊಂಡಿದ್ದೇವೆ. ಈ ವ್ಯವಸ್ಥೆ ಯಾವ ತರ ನಡೆಯುತ್ತೆ ಅನ್ನೋದನ್ನ ನಾನು ಕೂಡ ಈಗ ತಿಳಿದು ಕೊಳ್ಳುತ್ತಿದ್ದೇನೆ ಎಂದು ಹೇಳಿದರು.

suddiyaana