ರಾಹುಲ್ ಗಾಂಧಿ ಮತಗಳ್ಳತನದ ಆರೋಪಕ್ಕೆ ಬಿಜೆಪಿ ತೀವ್ರ ತಿರುಗೇಟು

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಮತ ವಂಚನೆ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ ʻಎಚ್-ಫೈಲ್ಸ್ʼ ಬಿಜೆಪಿ ತೀವ್ರ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಸುಳ್ಳುಗಳನ್ನು ಹರಡಿ ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಆರೋಪಿಸಿದರೆ, ಕೇಂದ್ರ ಸಚಿವ ಕಿರಣ್ ರಿಜಿಜು, ʻರಾಹುಲ್ ಅವರ ಆಟಂ ಬಾಂಬ್ ಎಂದಿಗೂ ಸ್ಫೋಟಿಸುವುದೇ ಇಲ್ಲʼ ಎಂದು ವ್ಯಂಗ್ಯವಾಡಿದ್ದಾರೆ.
ʻರಾಹುಲ್ ಗಾಂಧಿ ಅವರು ದೇಶದ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸ್ಪಷ್ಟವಾದ ಗುರಿ ಇಲ್ಲದಂತಾಗಿದೆ. ಸುಳ್ಳುಗಳನ್ನು ಹರಡುತ್ತಾ ದೇಶದ ಜನರ ದಾರಿತಪ್ಪಿಸುತ್ತಿದ್ದಾರೆʼ ಎಂದು ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ರಾಹುಲ್ ಗಾಂಧಿ ಮತಗಳ್ಳತನದ ಆರೋಪಕ್ಕೆ ಬಿಜೆಪಿ ತೀವ್ರ ತಿರುಗೇಟು

ನೋಡಿರಿ

