ಶೋಭಾ ಕರಂದ್ಲಾಜೆ ಬಾಯಿ ಅದುಮಿ ಹಿಡಿದಿರುವವರು ಯಾರು? ವಿಟ್ಲ ದಲಿತ ಬಾಲಕಿ ಅತ್ಯಾಚಾರದ ಬಗ್ಗೆ ಬಿಜೆಪಿ ಮೌನವೇಕೆ? – ಕಾಂಗ್ರೆಸ್‌ ಕಿಡಿ

ಶೋಭಾ ಕರಂದ್ಲಾಜೆ ಬಾಯಿ ಅದುಮಿ ಹಿಡಿದಿರುವವರು ಯಾರು? ವಿಟ್ಲ ದಲಿತ ಬಾಲಕಿ ಅತ್ಯಾಚಾರದ ಬಗ್ಗೆ ಬಿಜೆಪಿ ಮೌನವೇಕೆ? – ಕಾಂಗ್ರೆಸ್‌ ಕಿಡಿ

ಬೆಂಗಳೂರು: ಕಾಂಗ್ರೆಸ್‌, ಬಿಜೆಪಿ ನಡುವಿನ ಟ್ವೀಟ್‌ ಸಮರ ನಿಲ್ಲುವಂತೆ ಕಾಣುತ್ತಿಲ್ಲ. ನಿರಂತರ ಆರೋಪ. ಪ್ರತ್ಯಾರೋಪ ನಡೆಸುತ್ತಲೇ ಬಂದಿದ್ದಾರೆ. ಇದೀಗ ರಾಜ್ಯ ಕಾಂಗ್ರೆಸ್‌, ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಪ್ರಶ್ನೆ ಮಾಡಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ ವಿಟ್ಲದಲ್ಲಿಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಮೌನವೇಕೆ? ಆ ದಲಿತ ಬಾಲಕಿ ಹಿಂದೂ ಅಲ್ಲವೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇದನ್ನೂ ಓದಿ: ಫಿಟ್‌ನೆಸ್‌ ಚಾಲೆಂಜ್‌ ಅಂತಾ ಅತೀ ಹೆಚ್ಚು ನೀರು ಕುಡಿದಳು.. ಕೊನೆಗೆ ಆಸ್ಪತ್ರೆ ಸೇರಿದಳು!

ಬಿಜೆಪಿಗೆ ನಂಟಿರುವವರು ನಡೆಸುವ ಅತ್ಯಾಚಾರ, ಅನಾಚಾರಗಳಿಗೆ ಬಿಜೆಪಿಯ ಸಮ್ಮತಿ ಇದೆಯೇ? ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು? ಎಂದು ಕಾಂಗ್ರೆಸ್‌ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ಕಾಂಗ್ರೆಸ್‌ ಶೋಭಾ ಕರಂದ್ಲಾಜೆ ಅವರ ಪೊಸ್ಟರ್‌ ಒಂದನ್ನು ಪೋಸ್ಟ್‌ ಮಾಡಿದೆ. ಈ ಪೋಸ್ಟರ್‌ನಲ್ಲಿ ಶೋಭಾ ಕರಂದ್ಲಾಜೆ ಅವರ ಬಾಯಿಗೆ ಪ್ಲಾಸ್ಟರ್‌ ಹಾಕಿ ಹಿಂದೂ ಹೆಣ್ಣು ಮಕ್ಕಳನ್ನು ಹುರಿದು ಮುಕ್ಕುತ್ತಿರುವ ಸಂಘಿಗಳ ಬಗ್ಗೆ ಬಿಜೆಪಿ ಮೌನವೇಕೆ? ಶೋಭಾ ಕರಂದ್ಲಾಜೆಯವರ ಬಾಯಿಯನ್ನು ಒತ್ತಿ ಹಿಡಿದವರು ಯಾರು? ಎಂದು ಪ್ರಶ್ನಿಸಿದೆ.

suddiyaana