ಮಹಮ್ಮದ್ ಪೈಗಂಬರ್ ವಿರುದ್ಧ ಯತ್ನಾಳ್ ವಿವಾದಾತ್ಮಕ ಹೇಳಿಕೆ – ಶಾಸಕನ ವಿರುದ್ಧ ಕೇಸ್ ದಾಖಲು

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸದಾ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಬಿಜೆಪಿಯಿಂದ ಯತ್ನಾಳ್ ಅವರನ್ನ ಉಚ್ಛಾಟನೆ ಮಾಡಲಾಗಿತ್ತು. ಇದೀಗ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕಾನೂನು ಸಂಕಷ್ಟ ಎದುರಿಸುವಂತೆ ಆಗಿದೆ.
ಇದನ್ನೂ ಓದಿ: ಮೋದಿಯವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ- ದೇಶವನ್ನೇ ಮಾರಿ ಬಿಡುತ್ತಾರೆಂದು ಕಿಡಿ
ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಹನ್ನಾನ್ ಎಂಬವರು ದೂರು ದಾಖಲಿಸಿದ್ದರು. ಯತ್ನಾಳ್ ಅವರು `ಭಾಷಣದ ವೇಳೆ, `ದಿ.ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ’ ಎಂದಿದ್ದರು. ಈ ರೀತಿ ಮಾತನಾಡಿರುವುದು ಅಪಮಾನಕಾರಿ. ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಯತ್ನಾಳ್ ಹೇಳಿಕೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.