ನೇಪಾಳದ ಪ್ರಗತಿಗೆ ಭಾರತ ಸಿದ್ಧ – ಪ್ರಧಾನಿ ಸುಶೀಲಾ ಕರ್ಕಿಗೆ ಮೋದಿ ಅಭಿನಂದನೆ

ನೇಪಾಳದ ಪ್ರಗತಿಗೆ ಭಾರತ ಸಿದ್ಧ –  ಪ್ರಧಾನಿ ಸುಶೀಲಾ ಕರ್ಕಿಗೆ ಮೋದಿ ಅಭಿನಂದನೆ

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಸುಶೀಲಾ ಕರ್ಕಿ ಅವರನ್ನು ಪ್ರಧಾನಿ ನರೇಂದ್ರ ಮೋದಿ  ಅಭಿನಂದಿಸಿದ್ದಾರೆ . ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀಮತಿ ಸುಶೀಲಾ ಕರ್ಕಿ ಅವರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ದೃಢವಾಗಿ ಬದ್ಧವಾಗಿದೆ” ಎಂದು ಅವರು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ದುರಂತಕ್ಕೆ 9 ಬಲಿ – ಮೋದಿ ಸಂತಾಪ , 2 ಲಕ್ಷ ಪರಿಹಾರ

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ  ಅವರು ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಶುಕ್ರವಾರ ಸಂಜೆ ಶೀತಲ್ ನಿವಾಸದಲ್ಲಿ ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ನೇಪಾಳದ ಪ್ರಧಾನಿಯಾದ ಮೊದಲ ಮಹಿಳೆ ಕರ್ಕಿ. ಸಂವಿಧಾನದ 61ನೇ ವಿಧಿಯಡಿಯಲ್ಲಿ ಅಧ್ಯಕ್ಷ ಪೌಡೆಲ್ ಅವರು ಕರ್ಕಿ ಅವರನ್ನು ಪ್ರಧಾನಿಯಾಗಿ ನೇಮಿಸಿದ್ದಾರೆ.

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಯನ್ನು ಭಾರತ ಸ್ವಾಗತಿಸಿದ್ದು , ಇದು ಶಾಂತಿ ಮತ್ತು ಸ್ಥಿರತೆಯನ್ನು ಬೆಳೆಸಲು ಸಹಾಯ ಮಾಡುತ್ತದೆ. ಅಭಿವೃದ್ಧಿ ಪಾಲುದಾರನಾಗಿ, ಭಾರತವು ನಮ್ಮ ಎರಡು ಜನರು ಮತ್ತು ದೇಶಗಳ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ನೇಪಾಳದೊಂದಿಗೆ ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಜೆನ್ ಝಡ್ ದೊಡ್ಡ ಪ್ರಮಾಣದ ಪ್ರತಿಭಟನೆಯನ್ನು ಪ್ರಾರಂಭಿಸಿದ ನಂತರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮಂಗಳವಾರ ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರವನ್ನು ನಿಗ್ರಹಿಸುವುದು, ಪಕ್ಷಪಾತವನ್ನು ಕೊನೆಗೊಳಿಸುವುದು ಮತ್ತು ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ನಿಷೇಧವನ್ನು ತೆಗೆದುಹಾಕುವುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಸೇರಿವೆ.  ನೇಪಾಳದಲ್ಲಿ ನಡೆದ ಈ ಜೆನ್ ಝಡ್ ಪ್ರತಿಭಟನೆಯಲ್ಲಿ ಭಾರತೀಯ ನಾಗರಿಕನು ಸೇರಿದಂತೆ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ.

Kishor KV