ಬಿಸಿಯೂಟ ಕಾರ್ಯಕರ್ತೆಯರಿಗೂ ಸಿಹಿಸುದ್ದಿ..! – ಅತಿಥಿ ಶಿಕ್ಷಕರಿಗೆ ಸಿದ್ದರಾಮಯ್ಯ ಗುಡ್ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಕರ್ನಾಟಕ ಮುಂಗಡ ಪತ್ರ ಮಂಡನೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆ 16ನೇ ಬಜೆಟ್ನಲ್ಲಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಅನ್ನು “ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ಕರ್ನಾಟಕ ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ” ಎಂದು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ ಬಜೆಟ್ ಮಂಡನೆಯ ಹೈಲೈಟ್ಸ್ ಇಲ್ಲಿದೆ.ʼ
ಯಾವ ಇಲಾಖೆಗೆ ಎಷ್ಟು ಅನುದಾನ?
₹3,977 ಕೋಟಿ ಪಶುಸಂಗೋಪನೆ & ಮೀನುಗಾರಿಕೆ
₹7,145 ಕೋಟಿ ಕೃಷಿ & ತೋಟಗಾರಿಕೆ ಇಲಾಖೆ
₹8,275 ಆಹಾರ ನಾಗರಿಕ ಸರಬರಾಜು ಇಲಾಖೆ
₹11,841 ಲೋಕೋಪಯೋಗಿ ಇಲಾಖೆ
₹16,955 ಕೋಟಿ ಸಮಾಜ ಕಲ್ಯಾಣ ಇಲಾಖೆ
₹17,201 ಕೋಟಿ ಕಂದಾಯ ಇಲಾಖೆ
₹17,475 ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ
₹45,286 ಕೋಟಿ ಶಿಕ್ಷಣ ಇಲಾಖೆ
₹34,955 ಮಹಿಳಾ ಮತ್ತು ಮಕ್ಕಳ ಕಲ್ಯಾಣ
₹26,896 ಇಂಧನ ಇಲಾಖೆ ಇಲಾಖೆ
₹26,735 ಗ್ರಾಮೀಣಾಭಿವೃದ್ಧಿ ಇಲಾಖೆ
₹22,181 ನೀರಾವರಿ ಇಲಾಖೆ
₹21,405 ನಗರಾಭಿವೃದ್ಧಿ, ವಸತಿ ಇಲಾಖೆ
₹20,625 ಒಳಾಡಳಿತ & ಸಾರಿಗೆ ಇಲಾಖೆ
- 2025-26ನೇ ಸಾಲಿನ ಬಜೆಟ್ ಗಾತ್ರ- ₹4,09,549 ಲಕ್ಷ ಕೋಟಿ
- 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ
- 4.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸುತ್ತಿರುವ ಸಿಎಂ
- 7 ಕೋಟಿ ಜನರ ಬದುಕಿನ ಭರವಸೆಯ ಉಸಿರು ಬಜೆಟ್
- ಕುವೆಂಪು ಬರೆದ ಪದ್ಯ ಹೇಳಿದ ಸಿಎಂ ಸಿದ್ದರಾಮಯ್ಯ
- ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ
- ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ
- ಗೌರವಧನ 1 ಸಾವಿರ ಹೆಚ್ಚಳ
- ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನ 2 ಸಾವಿರ ರೂ. ಹೆಚ್ಚಳ
- ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
- ಬಾಳೆಹಣ್ಣು, ಮೊಟ್ಟೆಗೆ 1,500 ರೂ. ಕೋಟಿ ಮೀಸಲು
- ಅಜೀಂ ಪ್ರೇಮ್ಜಿ ಸಹಯೋಗದಲ್ಲಿ ಹಂಚಿ
- ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1,000 ರೂ. ಹೆಚ್ಚಳ
- ಸಹಾಯಕಿಯರಿಗೆ 750 ರೂ. ಗೌರವಧನ ಹೆಚ್ಚಳ